ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.
ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರತಿನಿತ್ಯ ಹಾಗೂ ವಾರದ ಕೊನೆ ಹಾಗೂ ವಿಶೇಷ ದಿನಗಳಲ್ಲಿ ಹೆಚ್ಚಾಗಿ ಆಗಮಿಸುವ ಪ್ರವಾಸಿಗರು ತೆಪ್ಪದಲ್ಲಿ ತೆರಳಿ ಜಲಪಾತವನ್ನು ಕಣ್ಣುಂಬಿಕೊಳ್ಳುತ್ತಾರೆ.
ತೆಪ್ಪದ ದರ ಪರಿಷ್ಕರಣೆಯಾಗಿ ಹಲವು ವರ್ಷಗಳಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಜನರಿಗೆ 1,500 ನಿಗದಿಪಡಿಸಲಾಗಿದೆ. ನಮ್ಮಲ್ಲಿ 500 ಮಾತ್ರ ನಿಗಧಿಯಾಗಿದೆ.. ಅದನ್ನು ಜಾಸ್ತಿ ಮಾಡಬೇಕು’ ಎಂದು ತೆಪ್ಪ ನಿರ್ವಾಹಕರು ಒತ್ತಾಯಿಸುತ್ತಿದ್ದಾರೆ.
ಸದ್ಯ ಒಬ್ಬರಿಗೆ 125 ನಿಗದಿ ಪಡಿಸಲಾಗಿದೆ. ಒಂದು ತೆಪ್ಪದಲ್ಲಿ ನಾಲ್ಕು ಜನರಿಗಷ್ಟೇ ತೆರಳಲು ಅವಕಾಶ. ತೆಪ್ಪ ನಡೆಸುವವರ ಜೀವನಕ್ಕಾಗಿ ಶುಲ್ಕ ಹೆಚ್ಚು ಮಾಡಬೇಕೆಂದು ಒತ್ತಾಯಿಸಿ, ಈ ಸಂಬಂಧ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿಯನ್ನು ಸಲ್ಲಿಸಿದ್ದಾರೆ.
ಇನ್ನೂ ಹೊಗೆನೆಕಲ್ ನಲ್ಲಿ ತೆಪ್ಪದಲ್ಲಿ ತೆರಳುವವರಿಗೆ ಸುರಕ್ಷಾ ಕವಚ ನೀಡುತ್ತಿಲ್ಲ. ಒಂದು ತೆಪ್ಪದಲ್ಲಿ ನಾಲ್ಕಕ್ಕಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗುತ್ತಾರೆ. ಇದರ ಬೆನ್ನಲ್ಲೇ ಎಲ್ಲರಿಗೂ ರಕ್ಷಾ ಕವಚ ನೀಡುವುದಿಲ್ಲ. ರಕ್ಷಾ ಕವಚಗಳು ಹಳೆಯದಾಗಿವೆ. ಹಣದ ಆಸೆಗೆ ಹೆಚ್ಚೆಚ್ಚು ಜನರನ್ನು ಒಮ್ಮೆಲೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಪ್ರವಾಸಿಗರು ಆರೋಪಿಸುತ್ತಾರೆ.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…