ಚಾಮರಾಜನಗರ

ಹೊಗೇನಕಲ್‌ ಜಲಪಾತದಲ್ಲಿ ತೆಪ್ಪ ಶುಲ್ಕ ಹೆಚ್ಚಿಸಲು ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.

ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರತಿನಿತ್ಯ ಹಾಗೂ ವಾರದ ಕೊನೆ ಹಾಗೂ ವಿಶೇಷ ದಿನಗಳಲ್ಲಿ ಹೆಚ್ಚಾಗಿ ಆಗಮಿಸುವ ಪ್ರವಾಸಿಗರು ತೆಪ್ಪದಲ್ಲಿ ತೆರಳಿ ಜಲಪಾತವನ್ನು ಕಣ್ಣುಂಬಿಕೊಳ್ಳುತ್ತಾರೆ.

ತೆಪ್ಪದ ದರ ಪರಿಷ್ಕರಣೆಯಾಗಿ ಹಲವು ವರ್ಷಗಳಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಜನರಿಗೆ 1,500 ನಿಗದಿಪಡಿಸಲಾಗಿದೆ. ನಮ್ಮಲ್ಲಿ 500 ಮಾತ್ರ ನಿಗಧಿಯಾಗಿದೆ.. ಅದನ್ನು ಜಾಸ್ತಿ ಮಾಡಬೇಕು’ ಎಂದು ತೆಪ್ಪ ನಿರ್ವಾಹಕರು ಒತ್ತಾಯಿಸುತ್ತಿದ್ದಾರೆ.

ಸದ್ಯ ಒಬ್ಬರಿಗೆ 125 ನಿಗದಿ ಪಡಿಸಲಾಗಿದೆ. ಒಂದು ತೆಪ್ಪದಲ್ಲಿ ನಾಲ್ಕು ಜನರಿಗಷ್ಟೇ ತೆರಳಲು ಅವಕಾಶ. ತೆಪ್ಪ ನಡೆಸುವವರ ಜೀವನಕ್ಕಾಗಿ ಶುಲ್ಕ ಹೆಚ್ಚು ಮಾಡಬೇಕೆಂದು ಒತ್ತಾಯಿಸಿ, ಈ ಸಂಬಂಧ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿಯನ್ನು ಸಲ್ಲಿಸಿದ್ದಾರೆ.

ಇನ್ನೂ ಹೊಗೆನೆಕಲ್‌ ನಲ್ಲಿ ತೆಪ್ಪದಲ್ಲಿ ತೆರಳುವವರಿಗೆ ಸುರಕ್ಷಾ ಕವಚ ನೀಡುತ್ತಿಲ್ಲ. ಒಂದು ತೆಪ್ಪದಲ್ಲಿ ನಾಲ್ಕಕ್ಕಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗುತ್ತಾರೆ. ಇದರ ಬೆನ್ನಲ್ಲೇ ಎಲ್ಲರಿಗೂ ರಕ್ಷಾ ಕವಚ ನೀಡುವುದಿಲ್ಲ. ರಕ್ಷಾ ಕವಚಗಳು ಹಳೆಯದಾಗಿವೆ. ಹಣದ ಆಸೆಗೆ ಹೆಚ್ಚೆಚ್ಚು ಜನರನ್ನು ಒಮ್ಮೆಲೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಪ್ರವಾಸಿಗರು ಆರೋಪಿಸುತ್ತಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago