ಚಾಮರಾಜನಗರ

ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಒತ್ತಾಯಿಸಿದ್ದಾರೆ.

ಈ ಕುರಿತು ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಜ್ಞಾನ ಇಲ್ಲದೆ ಇರುವ ಅವಿದ್ಯಾವಂತನು ಕೂಡ ಹೆಣ್ಣು ಮಕ್ಕಳ ವಿರುದ್ಧ ಅಸಭ್ಯವಾಗಿ ನಡೆದುಕೊಳ್ಳುವುದಿಲ್ಲ. ಆದರೆ ಶಾಸಕರಾಗಿರುವ ಮುನಿರತ್ನ, ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ನಮ್ಮ ಭಾರತ ದೇಶದಲ್ಲಿ ಹೆಣ್ಣು ಮಕ್ಕಳಿಗೆ ತಾಯಿಯ ಸ್ಥಾನ ನೀಡಿದ್ದೇವೆ. ಅವರಿಗೆ ಗೌರವ ನೀಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಇಂತಹ ಹೆಣ್ಣುಮಕ್ಕಳ ಬಗ್ಗೆ ಗುತ್ತಿಗೆದಾರನ ಜೊತೆ ಅವಾಚ್ಯ ಶಬ್ದಗಳಿಂದ ಕೆಟ್ಟದಾಗಿ ನಿಂದಿಸಿ ಸಂಭಾಷಣೆ ಮಾಡಿರುವುದು ಪ್ರಯೋಗಾಲಯದಲ್ಲಿ ಸಾಬೀತಾದರೆ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡಬೇಕು. ಹೆಣ್ಣು ಮಕ್ಕಳ ವಿರುದ್ಧ ಕೆಟ್ಟದಾಗಿ ಮಾತನಾಡಿರುವ ಇವರ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡಿ ಇವರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಭಾರತಾಂಬೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವ ಬಿಜೆಪಿ ಪಕ್ಷದ ಶಾಸಕರೇ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಇಂತಹ ನಾಚಿಕೆಗೆಟ್ಟ ನಾಯಕರಿಂದ ಬಿಜೆಪಿ ಪಕ್ಷಕ್ಕೂ ಶೋಭೆ ತರುವುದಿಲ್ಲ. ಈ ನಿಟ್ಟಿನಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಆಡಿಯೋವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಧ್ವನಿ ಇವರದ್ದೇ ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದೊಮ್ಮೆ ಆಡಿಯೋ ನಕಲಿಯಾಗಿದ್ದರೆ ಪೊಲೀಸರು ಇದನ್ನು ಹರಿಬಿಟ್ಟವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್, ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಾಜು, ಗೋವಿಂದೇಗೌಡ ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago