ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಜ್ಞಾನ ಇಲ್ಲದೆ ಇರುವ ಅವಿದ್ಯಾವಂತನು ಕೂಡ ಹೆಣ್ಣು ಮಕ್ಕಳ ವಿರುದ್ಧ ಅಸಭ್ಯವಾಗಿ ನಡೆದುಕೊಳ್ಳುವುದಿಲ್ಲ. ಆದರೆ ಶಾಸಕರಾಗಿರುವ ಮುನಿರತ್ನ, ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ನಮ್ಮ ಭಾರತ ದೇಶದಲ್ಲಿ ಹೆಣ್ಣು ಮಕ್ಕಳಿಗೆ ತಾಯಿಯ ಸ್ಥಾನ ನೀಡಿದ್ದೇವೆ. ಅವರಿಗೆ ಗೌರವ ನೀಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಇಂತಹ ಹೆಣ್ಣುಮಕ್ಕಳ ಬಗ್ಗೆ ಗುತ್ತಿಗೆದಾರನ ಜೊತೆ ಅವಾಚ್ಯ ಶಬ್ದಗಳಿಂದ ಕೆಟ್ಟದಾಗಿ ನಿಂದಿಸಿ ಸಂಭಾಷಣೆ ಮಾಡಿರುವುದು ಪ್ರಯೋಗಾಲಯದಲ್ಲಿ ಸಾಬೀತಾದರೆ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡಬೇಕು. ಹೆಣ್ಣು ಮಕ್ಕಳ ವಿರುದ್ಧ ಕೆಟ್ಟದಾಗಿ ಮಾತನಾಡಿರುವ ಇವರ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡಿ ಇವರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.
ಭಾರತಾಂಬೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವ ಬಿಜೆಪಿ ಪಕ್ಷದ ಶಾಸಕರೇ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಇಂತಹ ನಾಚಿಕೆಗೆಟ್ಟ ನಾಯಕರಿಂದ ಬಿಜೆಪಿ ಪಕ್ಷಕ್ಕೂ ಶೋಭೆ ತರುವುದಿಲ್ಲ. ಈ ನಿಟ್ಟಿನಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಆಡಿಯೋವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಧ್ವನಿ ಇವರದ್ದೇ ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದೊಮ್ಮೆ ಆಡಿಯೋ ನಕಲಿಯಾಗಿದ್ದರೆ ಪೊಲೀಸರು ಇದನ್ನು ಹರಿಬಿಟ್ಟವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್, ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಾಜು, ಗೋವಿಂದೇಗೌಡ ಹಾಜರಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…