ಚಾಮರಾಜನಗರ

ಹನೂರಿನಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ

ಹನೂರು: ಹನೂರು ಪಟ್ಟಣದ ಆರ್‌.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್‌ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌ರವರನ್ನು ಒತ್ತಾಯಿಸಿದರು.

ಹನೂರು ಹೋಬಳಿ ವ್ಯಾಪ್ತಿಯ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್‌ 739ರಲ್ಲಿ ಆರ್‌.ಎಸ್.ದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಾರ್ವಜನಿಕ ಸ್ಮಶಾನಕ್ಕೆ 40 ಸೆಂಟ್‌ ನಿವೇಶನವನ್ನು 2023 ಸೆಪ್ಟೆಂಬರ್‌ನಲ್ಲಿ ಮಂಜೂರು ಮಾಡಲಾಗಿದೆ.

ಆದರೆ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಯೊಬ್ಬರು ಸ್ಮಶಾನ ಹಾಗೂ ಸರ್ಕಾರಿ ಜಾಗ ಸೇರಿದಂತೆ ಸುಮಾರು 2 ಎಕರೆಗೂ ಹೆಚ್ಚು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಗಳು ಮೃತಪಟ್ಟಾಗ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದೇ ಪರದಾಡುವಂತಾಗಿದೆ.

ಜಮೀನು ಇರುವವರು ಮೃತಪಟ್ಟಾಗ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ. ಆದರೆ ಜಮೀನು ಇಲ್ಲದವರು ತೀವ್ರ ಕಷ್ಟ ಪಡುವಂತಾಗಿದೆ. ಆದ್ದರಿಂದ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಆರ್.ಎಸ್.ದೊಡ್ಡಿ ಗ್ರಾಮದ ಉಪ್ಪಾರ ಸಮುದಾಯದ ವೆಂಕಟರಂಗಶೆಟ್ಟಿ ಎಂಬುವವರು ಮೃತಪಟ್ಟಿದ್ದರು. ಇವರಿಗೆ ಸ್ವಂತ ಜಮೀನು ಇಲ್ಲದೆ ಇರುವುದರಿಂದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಆದರೆ ಸ್ಮಶಾನ ಜಾಗ ಒತ್ತುವರಿಯಾಗಿರುವುದು ತಿಳಿಯುತ್ತಿದ್ದಂತೆ ಸ್ಥಳೀಯ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌, ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌, ಕಂದಾಯ ನಿರೀಕ್ಷಕ ಶೇಷಣ್ಣ, ಇನ್ಸ್‌ಪೆಕ್ಟರ್‌ ಶಶಿಕುಮಾರ್‌ ಅವರಿಗೆ ಮಾಹಿತಿ ನೀಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದೊಯ್ದು ಒತ್ತುವರಿ ತೆರವುಗೊಳಿಸಿ ಅಂತ್ಯಕ್ರಿಯೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.

ಈ ವೇಳೆ ಮಾತನಾಡಿದ ತಹಶಿಲ್ದಾರ್‌ ಗುರುಪ್ರಸಾದ್‌ ಅವರು, ಸರ್ಕಾರ ಈಗಾಗಲೇ ಈ ಗ್ರಾಮದ ನಿವಾಸಿಗಳಿಗೆ ಸ್ಮಶಾನಕ್ಕೆ ಜಾಗ ನೀಡಿದೆ. ಆದರೆ ಖಾಸಗಿ ವ್ಯಕ್ತಿ ಜಮೀನು ಒತ್ತುವರಿ ಮಾಡಿಕೊಂಡಿರುವುದರಿಂದ ಸೋಮವಾರ ಅಳತೆ ಮಾಡಿ ಗಡಿ ಗುರುತಿಸಿ ಪಟ್ಟಣ ಪಂಚಾಯಿತಿಗೆ ಹಸ್ತಾಂತರ ಮಾಡುವುದಾಗಿ ತಿಳಿಸಿದರು.

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

12 mins ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

33 mins ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

43 mins ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

1 hour ago

ಇಂದಿನಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ಅರಣ್ಯ ಸಚಿವರಿಂದ ಕಟ್ಟುನಿಟ್ಟಿನ ಆದೇಶಗಳು

ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…

2 hours ago

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

2 hours ago