ಚಾಮರಾಜನಗರ

ಹನೂರಿನಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ

ಹನೂರು: ಹನೂರು ಪಟ್ಟಣದ ಆರ್‌.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್‌ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌ರವರನ್ನು ಒತ್ತಾಯಿಸಿದರು.

ಹನೂರು ಹೋಬಳಿ ವ್ಯಾಪ್ತಿಯ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್‌ 739ರಲ್ಲಿ ಆರ್‌.ಎಸ್.ದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಾರ್ವಜನಿಕ ಸ್ಮಶಾನಕ್ಕೆ 40 ಸೆಂಟ್‌ ನಿವೇಶನವನ್ನು 2023 ಸೆಪ್ಟೆಂಬರ್‌ನಲ್ಲಿ ಮಂಜೂರು ಮಾಡಲಾಗಿದೆ.

ಆದರೆ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಯೊಬ್ಬರು ಸ್ಮಶಾನ ಹಾಗೂ ಸರ್ಕಾರಿ ಜಾಗ ಸೇರಿದಂತೆ ಸುಮಾರು 2 ಎಕರೆಗೂ ಹೆಚ್ಚು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಗಳು ಮೃತಪಟ್ಟಾಗ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದೇ ಪರದಾಡುವಂತಾಗಿದೆ.

ಜಮೀನು ಇರುವವರು ಮೃತಪಟ್ಟಾಗ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ. ಆದರೆ ಜಮೀನು ಇಲ್ಲದವರು ತೀವ್ರ ಕಷ್ಟ ಪಡುವಂತಾಗಿದೆ. ಆದ್ದರಿಂದ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಆರ್.ಎಸ್.ದೊಡ್ಡಿ ಗ್ರಾಮದ ಉಪ್ಪಾರ ಸಮುದಾಯದ ವೆಂಕಟರಂಗಶೆಟ್ಟಿ ಎಂಬುವವರು ಮೃತಪಟ್ಟಿದ್ದರು. ಇವರಿಗೆ ಸ್ವಂತ ಜಮೀನು ಇಲ್ಲದೆ ಇರುವುದರಿಂದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಆದರೆ ಸ್ಮಶಾನ ಜಾಗ ಒತ್ತುವರಿಯಾಗಿರುವುದು ತಿಳಿಯುತ್ತಿದ್ದಂತೆ ಸ್ಥಳೀಯ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌, ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌, ಕಂದಾಯ ನಿರೀಕ್ಷಕ ಶೇಷಣ್ಣ, ಇನ್ಸ್‌ಪೆಕ್ಟರ್‌ ಶಶಿಕುಮಾರ್‌ ಅವರಿಗೆ ಮಾಹಿತಿ ನೀಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದೊಯ್ದು ಒತ್ತುವರಿ ತೆರವುಗೊಳಿಸಿ ಅಂತ್ಯಕ್ರಿಯೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.

ಈ ವೇಳೆ ಮಾತನಾಡಿದ ತಹಶಿಲ್ದಾರ್‌ ಗುರುಪ್ರಸಾದ್‌ ಅವರು, ಸರ್ಕಾರ ಈಗಾಗಲೇ ಈ ಗ್ರಾಮದ ನಿವಾಸಿಗಳಿಗೆ ಸ್ಮಶಾನಕ್ಕೆ ಜಾಗ ನೀಡಿದೆ. ಆದರೆ ಖಾಸಗಿ ವ್ಯಕ್ತಿ ಜಮೀನು ಒತ್ತುವರಿ ಮಾಡಿಕೊಂಡಿರುವುದರಿಂದ ಸೋಮವಾರ ಅಳತೆ ಮಾಡಿ ಗಡಿ ಗುರುತಿಸಿ ಪಟ್ಟಣ ಪಂಚಾಯಿತಿಗೆ ಹಸ್ತಾಂತರ ಮಾಡುವುದಾಗಿ ತಿಳಿಸಿದರು.

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…

25 mins ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…

57 mins ago

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…

1 hour ago

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

1 hour ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

1 hour ago

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…

2 hours ago