ಚಾಮರಾಜನಗರ

ಹನೂರಿನಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ

ಹನೂರು: ಹನೂರು ಪಟ್ಟಣದ ಆರ್‌.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್‌ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌ರವರನ್ನು ಒತ್ತಾಯಿಸಿದರು.

ಹನೂರು ಹೋಬಳಿ ವ್ಯಾಪ್ತಿಯ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್‌ 739ರಲ್ಲಿ ಆರ್‌.ಎಸ್.ದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಾರ್ವಜನಿಕ ಸ್ಮಶಾನಕ್ಕೆ 40 ಸೆಂಟ್‌ ನಿವೇಶನವನ್ನು 2023 ಸೆಪ್ಟೆಂಬರ್‌ನಲ್ಲಿ ಮಂಜೂರು ಮಾಡಲಾಗಿದೆ.

ಆದರೆ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಯೊಬ್ಬರು ಸ್ಮಶಾನ ಹಾಗೂ ಸರ್ಕಾರಿ ಜಾಗ ಸೇರಿದಂತೆ ಸುಮಾರು 2 ಎಕರೆಗೂ ಹೆಚ್ಚು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಗಳು ಮೃತಪಟ್ಟಾಗ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದೇ ಪರದಾಡುವಂತಾಗಿದೆ.

ಜಮೀನು ಇರುವವರು ಮೃತಪಟ್ಟಾಗ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ. ಆದರೆ ಜಮೀನು ಇಲ್ಲದವರು ತೀವ್ರ ಕಷ್ಟ ಪಡುವಂತಾಗಿದೆ. ಆದ್ದರಿಂದ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಆರ್.ಎಸ್.ದೊಡ್ಡಿ ಗ್ರಾಮದ ಉಪ್ಪಾರ ಸಮುದಾಯದ ವೆಂಕಟರಂಗಶೆಟ್ಟಿ ಎಂಬುವವರು ಮೃತಪಟ್ಟಿದ್ದರು. ಇವರಿಗೆ ಸ್ವಂತ ಜಮೀನು ಇಲ್ಲದೆ ಇರುವುದರಿಂದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಆದರೆ ಸ್ಮಶಾನ ಜಾಗ ಒತ್ತುವರಿಯಾಗಿರುವುದು ತಿಳಿಯುತ್ತಿದ್ದಂತೆ ಸ್ಥಳೀಯ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌, ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌, ಕಂದಾಯ ನಿರೀಕ್ಷಕ ಶೇಷಣ್ಣ, ಇನ್ಸ್‌ಪೆಕ್ಟರ್‌ ಶಶಿಕುಮಾರ್‌ ಅವರಿಗೆ ಮಾಹಿತಿ ನೀಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದೊಯ್ದು ಒತ್ತುವರಿ ತೆರವುಗೊಳಿಸಿ ಅಂತ್ಯಕ್ರಿಯೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.

ಈ ವೇಳೆ ಮಾತನಾಡಿದ ತಹಶಿಲ್ದಾರ್‌ ಗುರುಪ್ರಸಾದ್‌ ಅವರು, ಸರ್ಕಾರ ಈಗಾಗಲೇ ಈ ಗ್ರಾಮದ ನಿವಾಸಿಗಳಿಗೆ ಸ್ಮಶಾನಕ್ಕೆ ಜಾಗ ನೀಡಿದೆ. ಆದರೆ ಖಾಸಗಿ ವ್ಯಕ್ತಿ ಜಮೀನು ಒತ್ತುವರಿ ಮಾಡಿಕೊಂಡಿರುವುದರಿಂದ ಸೋಮವಾರ ಅಳತೆ ಮಾಡಿ ಗಡಿ ಗುರುತಿಸಿ ಪಟ್ಟಣ ಪಂಚಾಯಿತಿಗೆ ಹಸ್ತಾಂತರ ಮಾಡುವುದಾಗಿ ತಿಳಿಸಿದರು.

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

13 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

13 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

14 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

14 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

15 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

23 hours ago