ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್ ವೈ.ಕೆ.ಗುರುಪ್ರಸಾದ್ರವರನ್ನು ಒತ್ತಾಯಿಸಿದರು.
ಹನೂರು ಹೋಬಳಿ ವ್ಯಾಪ್ತಿಯ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್ 739ರಲ್ಲಿ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಾರ್ವಜನಿಕ ಸ್ಮಶಾನಕ್ಕೆ 40 ಸೆಂಟ್ ನಿವೇಶನವನ್ನು 2023 ಸೆಪ್ಟೆಂಬರ್ನಲ್ಲಿ ಮಂಜೂರು ಮಾಡಲಾಗಿದೆ.
ಆದರೆ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಯೊಬ್ಬರು ಸ್ಮಶಾನ ಹಾಗೂ ಸರ್ಕಾರಿ ಜಾಗ ಸೇರಿದಂತೆ ಸುಮಾರು 2 ಎಕರೆಗೂ ಹೆಚ್ಚು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿಗಳು ಮೃತಪಟ್ಟಾಗ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದೇ ಪರದಾಡುವಂತಾಗಿದೆ.
ಜಮೀನು ಇರುವವರು ಮೃತಪಟ್ಟಾಗ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ. ಆದರೆ ಜಮೀನು ಇಲ್ಲದವರು ತೀವ್ರ ಕಷ್ಟ ಪಡುವಂತಾಗಿದೆ. ಆದ್ದರಿಂದ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಆರ್.ಎಸ್.ದೊಡ್ಡಿ ಗ್ರಾಮದ ಉಪ್ಪಾರ ಸಮುದಾಯದ ವೆಂಕಟರಂಗಶೆಟ್ಟಿ ಎಂಬುವವರು ಮೃತಪಟ್ಟಿದ್ದರು. ಇವರಿಗೆ ಸ್ವಂತ ಜಮೀನು ಇಲ್ಲದೆ ಇರುವುದರಿಂದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಆದರೆ ಸ್ಮಶಾನ ಜಾಗ ಒತ್ತುವರಿಯಾಗಿರುವುದು ತಿಳಿಯುತ್ತಿದ್ದಂತೆ ಸ್ಥಳೀಯ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್, ತಹಶಿಲ್ದಾರ್ ವೈ.ಕೆ.ಗುರುಪ್ರಸಾದ್, ಕಂದಾಯ ನಿರೀಕ್ಷಕ ಶೇಷಣ್ಣ, ಇನ್ಸ್ಪೆಕ್ಟರ್ ಶಶಿಕುಮಾರ್ ಅವರಿಗೆ ಮಾಹಿತಿ ನೀಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದೊಯ್ದು ಒತ್ತುವರಿ ತೆರವುಗೊಳಿಸಿ ಅಂತ್ಯಕ್ರಿಯೆ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ತಹಶಿಲ್ದಾರ್ ಗುರುಪ್ರಸಾದ್ ಅವರು, ಸರ್ಕಾರ ಈಗಾಗಲೇ ಈ ಗ್ರಾಮದ ನಿವಾಸಿಗಳಿಗೆ ಸ್ಮಶಾನಕ್ಕೆ ಜಾಗ ನೀಡಿದೆ. ಆದರೆ ಖಾಸಗಿ ವ್ಯಕ್ತಿ ಜಮೀನು ಒತ್ತುವರಿ ಮಾಡಿಕೊಂಡಿರುವುದರಿಂದ ಸೋಮವಾರ ಅಳತೆ ಮಾಡಿ ಗಡಿ ಗುರುತಿಸಿ ಪಟ್ಟಣ ಪಂಚಾಯಿತಿಗೆ ಹಸ್ತಾಂತರ ಮಾಡುವುದಾಗಿ ತಿಳಿಸಿದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…