ಚಾಮರಾಜನಗರ

ಕಳ್ಳಬೇಟೆ ವಿರುದ್ಧ ಬಂಡೀಪುರ ಅರಣ್ಯದಲ್ಲಿ ಕಠಿಣ ಕ್ರಮ

ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ.

ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ.

ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ ಸಲ್ಲುತ್ತದೆ.

ಶ್ವಾನದಳ ತರಬೇತಿ ಕೇಂದ್ರವನ್ನು ಮೈಸೂರು ವೃತ್ತದ ಸಿಎಫ್‌ ಡಾ.ಮಾಲತಿ ಪ್ರಿಯಾ ಅವರು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಹುಲಿ ಯೋಜನೆ ನಿರ್ದೇಶಕ ಡಾ.ರಮೇಶ್‌ ಕುಮಾರ್‌, ಬಂಡೀಪುರದ ಸಿಎಫ್‌ಓ ಪ್ರಭಾಕರನ್‌, ಎಸಿಎಫ್‌ ನವೀನ್‌ ಕುಮಾರ್‌, ಆರ್‌ಎಫ್‌ಓ ಮಲ್ಲೇಶ್‌, ಶ್ವಾನದಳ ತರಬೇತಿದಾರ ಅಮೃತ್‌ ಶ್ರೀಧರ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಬಂಡೀಪುರ ಅರಣ್ಯ ಇಲಾಖೆ ವತಿಯಿಂದ ಟ್ರ್ಯಾಕರ್‌ ಡಾಗ್‌ ಸ್ಕ್ವಾಡ್‌ ರಚಿಸಲಾಗಿದ್ದು, ಸುಮಾರು 20 ಮಂದಿ ಸಿಬ್ಬಂದಿಗಳನ್ನು ಒಳಗೊಂಡ 12 ಶ್ವಾನಗಳಿಗೆ ತರಬೇತಿ ನಡೆಸಲಾಗುತ್ತಿದೆ.

ಇಲ್ಲಿ ಬೆಲ್ಜಿಯಂ ಮೆಲಿನೋಯಿಸ್‌ ತಳಿಯ ಶ್ವಾನ ಮರಿಗಳಿಗೆ ಸುಮಾರು 10ತಿಂಗಳ ಕಾಲ ನುರಿತ ಸಿಬ್ಬಂದಿ ತರಬೇತಿ ನೀಡಲಿದ್ದಾರೆ. ಈ ಮೂಲಕ ಅಳಿವಿನಂಚಿಲ್ಲಿರುವ ಕಾಡು ಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ.

ಇನ್ನು ಮುಂದೆ ಕಳ್ಳಬೇಟೆಗಾರರು ಕಾಡು ಪ್ರವೇಶಿಸಲು ಹೆದರಬೇಕಾದ ಪರಿಸ್ಥಿತಿ ಎದುರಾಗಿದ್ದು, ಶ್ವಾನಗಳು ಎಲ್ಲಾ ಕಡೆ ಹದ್ದಿನ ಕಣ್ಣಿಡಲಿವೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

8 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

8 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

8 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

8 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

8 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago