ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ.
ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ.
ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ ಸಲ್ಲುತ್ತದೆ.
ಶ್ವಾನದಳ ತರಬೇತಿ ಕೇಂದ್ರವನ್ನು ಮೈಸೂರು ವೃತ್ತದ ಸಿಎಫ್ ಡಾ.ಮಾಲತಿ ಪ್ರಿಯಾ ಅವರು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಹುಲಿ ಯೋಜನೆ ನಿರ್ದೇಶಕ ಡಾ.ರಮೇಶ್ ಕುಮಾರ್, ಬಂಡೀಪುರದ ಸಿಎಫ್ಓ ಪ್ರಭಾಕರನ್, ಎಸಿಎಫ್ ನವೀನ್ ಕುಮಾರ್, ಆರ್ಎಫ್ಓ ಮಲ್ಲೇಶ್, ಶ್ವಾನದಳ ತರಬೇತಿದಾರ ಅಮೃತ್ ಶ್ರೀಧರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬಂಡೀಪುರ ಅರಣ್ಯ ಇಲಾಖೆ ವತಿಯಿಂದ ಟ್ರ್ಯಾಕರ್ ಡಾಗ್ ಸ್ಕ್ವಾಡ್ ರಚಿಸಲಾಗಿದ್ದು, ಸುಮಾರು 20 ಮಂದಿ ಸಿಬ್ಬಂದಿಗಳನ್ನು ಒಳಗೊಂಡ 12 ಶ್ವಾನಗಳಿಗೆ ತರಬೇತಿ ನಡೆಸಲಾಗುತ್ತಿದೆ.
ಇಲ್ಲಿ ಬೆಲ್ಜಿಯಂ ಮೆಲಿನೋಯಿಸ್ ತಳಿಯ ಶ್ವಾನ ಮರಿಗಳಿಗೆ ಸುಮಾರು 10ತಿಂಗಳ ಕಾಲ ನುರಿತ ಸಿಬ್ಬಂದಿ ತರಬೇತಿ ನೀಡಲಿದ್ದಾರೆ. ಈ ಮೂಲಕ ಅಳಿವಿನಂಚಿಲ್ಲಿರುವ ಕಾಡು ಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ.
ಇನ್ನು ಮುಂದೆ ಕಳ್ಳಬೇಟೆಗಾರರು ಕಾಡು ಪ್ರವೇಶಿಸಲು ಹೆದರಬೇಕಾದ ಪರಿಸ್ಥಿತಿ ಎದುರಾಗಿದ್ದು, ಶ್ವಾನಗಳು ಎಲ್ಲಾ ಕಡೆ ಹದ್ದಿನ ಕಣ್ಣಿಡಲಿವೆ ಎನ್ನಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…