ಚಾಮರಾಜನಗರ

6 ತಿಂಗಳಲ್ಲಿ ಜನನ-ಮರಣ ದಾಖಲೆ ಡಿಜಿಟಲೀಕರಿಸಿ : ಜಿಲ್ಲಾಧಿಕಾರಿ ಶಿಲ್ಪನಾಗ್‌

ಚಾಮರಾಜನಗರ: ಜಿಲ್ಲೆಯಲ್ಲಿ ಜನನ-ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಇನ್ನು 6 ತಿಂಗಳ ಒಳಗಡೆ ಇದರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನನ- ಮರಣಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜು ಪ್ರವೇಶಕ್ಕಾಗಿ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲಿಕ್ಕಾಗಿ ಜನನ ಪ್ರಮಾಣ ಪ್ರಮಾಣಪತ್ರಗಳು ಅತ್ಯಾವಶ್ಯಕವಾಗಿವೆ ಎಂದರು.

ಸಾಕಷ್ಟು ವರ್ಷಗಳಿಂದ ಲಭ್ಯವಿರುವ ಜನನ-ಮರಣ ಪತ್ರಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಈ ದಾಖಲೆಗಳನ್ನು ಯಾವುದೇ ರೀತಿಯಲ್ಲಿಯೂ ತಡೆ ಮಾಡದೇ ಡಿಜಿಟಲೀಕರಣ ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.

ಸಾಮಾನ್ಯವಾಗಿ ಜನನ ಪ್ರಮಾಣಪತ್ರಗಳನ್ನು 21 ದಿನದೊಳಗೆ ನೀಡಬೇಕು. ಜನನ- ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ನಮ್ಮ ಜಿಲ್ಲೆಗೆ ಸಂಬಂಧಿಸಿದ ಜನನ -ಮರಣ ಪತ್ರಗಳು ಬೇರೆ ಜಿಲ್ಲೆಗಳಲ್ಲಿದ್ದರೂ ಅದನ್ನು ತರಿಸಿಕೊಳ್ಳುವ ಕೆಲಸವಾಗಬೇಕು ಎಂದು ಹೇಳಿದರು.

ಸಂಬಂಧಿಸಿದ ತಾಲ್ಲೂಕು ಕಚೇರಿಗಳಲ್ಲಿ ಆಯಾ ತಾಲ್ಲೂಕುವಾರು ಹಾಗೂ ವರ್ಷಾವಾರು ದಾಖಲೆಗಳನ್ನು ಸಂಗ್ರಹಿಸಿಡುವ ಕಾರ್ಯ ಆದ್ಯತೆ ಮೇರೆಗೆ ಆಗಬೇಕು. ಪರಿಶಿಷ್ಟ ಪಂಗಡಗಳ ಆದಿವಾಸಿ ಜನರು ವಾಸಿಸುವ ಹಾಡಿ-ಪೋಡುಗಳಲ್ಲಿನ ಮಕ್ಕಳಿಗೆ ಜನನ ಪ್ರಮಾಣಪತ್ರಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಬೇಕು ಎಂದು ತಾಕೀತು ಮಾಡಿದರು.

ಮರಣ ಪ್ರಮಾಣಪತ್ರದಲ್ಲಿ ಎಲ್ಲಾ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿಗಾ ವಹಿಸಬೇಕು.ಈ ಪ್ರಮಾಣಪತ್ರಗಳ ವಿತರಣೆಯಲ್ಲಿ ವಿಳಂಬಕ್ಕೆ ಅವಕಾಶವಾಗದಂತೆ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳು ಎಚ್ಚರ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಽಕಾರಿಗಳಿಗೆ ಸೂಕ್ತ ತರಬೇತಿ ಸಹ ನೀಡಬೇಕು ಎಂದರು.

ಜನನ ಮರಣ ಪ್ರಮಾಣಪತ್ರ ನೀಡಿಕೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಸಾಂಖ್ಯಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ದಾಖಲೆಗಳ ನಿರ್ವಹಣೆ ಸಂಬಂಧ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ಜಿಪಂ ಸಿಇಒ ಮೋನಾ ರೋತ್, ಎಎಸ್‌ಪಿ ಎಂ.ಎನ್. ಶಶಿಧರ್, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಪವನ್‌ಕುಮಾರ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ.ಮಹೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago