ಚಾಮರಾಜನಗರ

ಕಾಮಗಾರಿ ಹಂಚಿಕೆಯಲ್ಲಿ ಶಾಸಕರ ತಾರತಮ್ಯ

 ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು ಮಾಡಿಸಿ ತಾರತಮ್ಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವಾಧ್ಯಕ್ಷ ಸಿ.ಕೆ. ಮಂಜುನಾಥ್ ಆರೋಪಿಸಿದರು.

ಪರವಾನಗಿ ಪಡೆದಿರುವ ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಶೇ.೨೫ ರಷ್ಟು ಕಾಮಗಾರಿಗಳು ಮೀಸಲಿವೆ. ಆದರೆ, ಶಾಸಕರು ಗುತ್ತಿಗೆ ಪರವಾನಗಿ ಪಡೆದಿಲ್ಲದವರಿಗೆ ಕಾಮಗಾರಿಗಳನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಶಾಸಕರಿಂದ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಎಸ್ಸಿ, ಎಸ್ಟಿಗೆ ಮೀಸಲಿರುವ ಕಾಮಗಾರಿಗಳನ್ನು ಹಿರಿತನದ ಮೇಲೆ ನೀಡಬೇಕು. ತಮಗೆ ಬೇಕಾದವರಿಗೆ “ಕಾಮಗಾರಿಗಳನ್ನು ನೀಡುವಂತೆ ಶಿಫಾರಸ್ಸು ಮಾಡುವ ಶಾಸಕರು ನಮ್ಮ ಪರವಾಗಿ ಯಾವತ್ತು ಹೋರಾಟ ಮಾಡಿಲ್ಲ. ಅಲ್ಲದೇ ವಿಧಾನಸೌಧದಲ್ಲೂ ಧ್ವನಿ ಎತ್ತಿಲ್ಲ. ಇವರಿಗೂ ಗುತ್ತಿಗೆ ಮೀಸಲಾತಿಗೂ ಏನು ಸಂಬAಧ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಿಧಿಯಡಿ ರಾಜ್ಯ ಸರ್ಕಾರವು ಪ್ಯಾಕೇಜ್ ಮೂಲಕ ಕಾಮಗಾರಿಗೆ ಆದೇಶಿಸಿದೆ. ಇದರ ವಿರುದ್ಧ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು ಸಂಬAಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಏನೇ ಆದೇಶ ಮಾಡಿದರೂ ಷರತ್ತಿಗೆ ಬದ್ಧರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದೆ. ಈ ಸಮಸ್ಯೆ ಇತ್ಯರ್ಥವಾಗುವ ತನಕ ಟೆಂಡರ್ ಸಂಬAಧ ಯಾವುದೇ ಪ್ರಕ್ರಿಯೆ ನಡೆಸಬಾರದು. ಈ ಸಂಬAಧ ೯ ಜಿಲ್ಲೆಗಳಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದರು.

andolana

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

1 hour ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

1 hour ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

1 hour ago