ಚಾಮರಾಜನಗರ

ಕಾಮಗಾರಿ ಹಂಚಿಕೆಯಲ್ಲಿ ಶಾಸಕರ ತಾರತಮ್ಯ

 ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು ಮಾಡಿಸಿ ತಾರತಮ್ಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವಾಧ್ಯಕ್ಷ ಸಿ.ಕೆ. ಮಂಜುನಾಥ್ ಆರೋಪಿಸಿದರು.

ಪರವಾನಗಿ ಪಡೆದಿರುವ ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಶೇ.೨೫ ರಷ್ಟು ಕಾಮಗಾರಿಗಳು ಮೀಸಲಿವೆ. ಆದರೆ, ಶಾಸಕರು ಗುತ್ತಿಗೆ ಪರವಾನಗಿ ಪಡೆದಿಲ್ಲದವರಿಗೆ ಕಾಮಗಾರಿಗಳನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಶಾಸಕರಿಂದ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಎಸ್ಸಿ, ಎಸ್ಟಿಗೆ ಮೀಸಲಿರುವ ಕಾಮಗಾರಿಗಳನ್ನು ಹಿರಿತನದ ಮೇಲೆ ನೀಡಬೇಕು. ತಮಗೆ ಬೇಕಾದವರಿಗೆ “ಕಾಮಗಾರಿಗಳನ್ನು ನೀಡುವಂತೆ ಶಿಫಾರಸ್ಸು ಮಾಡುವ ಶಾಸಕರು ನಮ್ಮ ಪರವಾಗಿ ಯಾವತ್ತು ಹೋರಾಟ ಮಾಡಿಲ್ಲ. ಅಲ್ಲದೇ ವಿಧಾನಸೌಧದಲ್ಲೂ ಧ್ವನಿ ಎತ್ತಿಲ್ಲ. ಇವರಿಗೂ ಗುತ್ತಿಗೆ ಮೀಸಲಾತಿಗೂ ಏನು ಸಂಬAಧ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಿಧಿಯಡಿ ರಾಜ್ಯ ಸರ್ಕಾರವು ಪ್ಯಾಕೇಜ್ ಮೂಲಕ ಕಾಮಗಾರಿಗೆ ಆದೇಶಿಸಿದೆ. ಇದರ ವಿರುದ್ಧ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು ಸಂಬAಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಏನೇ ಆದೇಶ ಮಾಡಿದರೂ ಷರತ್ತಿಗೆ ಬದ್ಧರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದೆ. ಈ ಸಮಸ್ಯೆ ಇತ್ಯರ್ಥವಾಗುವ ತನಕ ಟೆಂಡರ್ ಸಂಬAಧ ಯಾವುದೇ ಪ್ರಕ್ರಿಯೆ ನಡೆಸಬಾರದು. ಈ ಸಂಬAಧ ೯ ಜಿಲ್ಲೆಗಳಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದರು.

andolana

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

1 hour ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

1 hour ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

2 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

2 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

2 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

3 hours ago