ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ
ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು ಮಾಡಿಸಿ ತಾರತಮ್ಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವಾಧ್ಯಕ್ಷ ಸಿ.ಕೆ. ಮಂಜುನಾಥ್ ಆರೋಪಿಸಿದರು.
ಪರವಾನಗಿ ಪಡೆದಿರುವ ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಶೇ.೨೫ ರಷ್ಟು ಕಾಮಗಾರಿಗಳು ಮೀಸಲಿವೆ. ಆದರೆ, ಶಾಸಕರು ಗುತ್ತಿಗೆ ಪರವಾನಗಿ ಪಡೆದಿಲ್ಲದವರಿಗೆ ಕಾಮಗಾರಿಗಳನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಶಾಸಕರಿಂದ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಎಸ್ಸಿ, ಎಸ್ಟಿಗೆ ಮೀಸಲಿರುವ ಕಾಮಗಾರಿಗಳನ್ನು ಹಿರಿತನದ ಮೇಲೆ ನೀಡಬೇಕು. ತಮಗೆ ಬೇಕಾದವರಿಗೆ “ಕಾಮಗಾರಿಗಳನ್ನು ನೀಡುವಂತೆ ಶಿಫಾರಸ್ಸು ಮಾಡುವ ಶಾಸಕರು ನಮ್ಮ ಪರವಾಗಿ ಯಾವತ್ತು ಹೋರಾಟ ಮಾಡಿಲ್ಲ. ಅಲ್ಲದೇ ವಿಧಾನಸೌಧದಲ್ಲೂ ಧ್ವನಿ ಎತ್ತಿಲ್ಲ. ಇವರಿಗೂ ಗುತ್ತಿಗೆ ಮೀಸಲಾತಿಗೂ ಏನು ಸಂಬAಧ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಿಧಿಯಡಿ ರಾಜ್ಯ ಸರ್ಕಾರವು ಪ್ಯಾಕೇಜ್ ಮೂಲಕ ಕಾಮಗಾರಿಗೆ ಆದೇಶಿಸಿದೆ. ಇದರ ವಿರುದ್ಧ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು ಸಂಬAಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಏನೇ ಆದೇಶ ಮಾಡಿದರೂ ಷರತ್ತಿಗೆ ಬದ್ಧರಾಗುವಂತೆ ನೋಟಿಸ್ನಲ್ಲಿ ತಿಳಿಸಿದೆ. ಈ ಸಮಸ್ಯೆ ಇತ್ಯರ್ಥವಾಗುವ ತನಕ ಟೆಂಡರ್ ಸಂಬAಧ ಯಾವುದೇ ಪ್ರಕ್ರಿಯೆ ನಡೆಸಬಾರದು. ಈ ಸಂಬAಧ ೯ ಜಿಲ್ಲೆಗಳಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…