ಚಾಮರಾಜನಗರ

ಕಾಮಗಾರಿ ಹಂಚಿಕೆಯಲ್ಲಿ ಶಾಸಕರ ತಾರತಮ್ಯ

 ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು ಮಾಡಿಸಿ ತಾರತಮ್ಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವಾಧ್ಯಕ್ಷ ಸಿ.ಕೆ. ಮಂಜುನಾಥ್ ಆರೋಪಿಸಿದರು.

ಪರವಾನಗಿ ಪಡೆದಿರುವ ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಶೇ.೨೫ ರಷ್ಟು ಕಾಮಗಾರಿಗಳು ಮೀಸಲಿವೆ. ಆದರೆ, ಶಾಸಕರು ಗುತ್ತಿಗೆ ಪರವಾನಗಿ ಪಡೆದಿಲ್ಲದವರಿಗೆ ಕಾಮಗಾರಿಗಳನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಶಾಸಕರಿಂದ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಎಸ್ಸಿ, ಎಸ್ಟಿಗೆ ಮೀಸಲಿರುವ ಕಾಮಗಾರಿಗಳನ್ನು ಹಿರಿತನದ ಮೇಲೆ ನೀಡಬೇಕು. ತಮಗೆ ಬೇಕಾದವರಿಗೆ “ಕಾಮಗಾರಿಗಳನ್ನು ನೀಡುವಂತೆ ಶಿಫಾರಸ್ಸು ಮಾಡುವ ಶಾಸಕರು ನಮ್ಮ ಪರವಾಗಿ ಯಾವತ್ತು ಹೋರಾಟ ಮಾಡಿಲ್ಲ. ಅಲ್ಲದೇ ವಿಧಾನಸೌಧದಲ್ಲೂ ಧ್ವನಿ ಎತ್ತಿಲ್ಲ. ಇವರಿಗೂ ಗುತ್ತಿಗೆ ಮೀಸಲಾತಿಗೂ ಏನು ಸಂಬAಧ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಿಧಿಯಡಿ ರಾಜ್ಯ ಸರ್ಕಾರವು ಪ್ಯಾಕೇಜ್ ಮೂಲಕ ಕಾಮಗಾರಿಗೆ ಆದೇಶಿಸಿದೆ. ಇದರ ವಿರುದ್ಧ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು ಸಂಬAಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಏನೇ ಆದೇಶ ಮಾಡಿದರೂ ಷರತ್ತಿಗೆ ಬದ್ಧರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದೆ. ಈ ಸಮಸ್ಯೆ ಇತ್ಯರ್ಥವಾಗುವ ತನಕ ಟೆಂಡರ್ ಸಂಬAಧ ಯಾವುದೇ ಪ್ರಕ್ರಿಯೆ ನಡೆಸಬಾರದು. ಈ ಸಂಬAಧ ೯ ಜಿಲ್ಲೆಗಳಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದರು.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

15 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

15 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

15 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

15 hours ago