ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದ್ದು, ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.
ದೀಪಾವಳಿ ಜಾತ್ರೆಯ ಅಂಗವಾಗಿ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷಾ ಪೂಜಾ ಕೈಂಕರ್ಯಗಳು ನೇರವೇರಿದ್ದು, ಲಕ್ಷಾಂತರ ಮಂದಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.
ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನಿನ್ನೆಯೂ ಮಹದೇಶ್ವರ ಸ್ವಾಮಿಯ ಬೆಳ್ಳಿ ರಥೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಜೊತೆಗೆ ಭಕ್ತರು, ಬಸವವಾಹನ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇವೆ, ಉರುಳು ಸೇವೆ ಮತ್ತು ಪಂಜಿನ ಸೇವೆಗಳನ್ನು ಸಮರ್ಪಿಸಿ ಹರಕೆ ತೀರಿಸಿದರು.
ಇನ್ನು ಜಾತ್ರೆಯ ಅಂಗವಾಗಿ ಸಹಸ್ರಾರು ಜನರು ಕಾಲ್ನಡಿಗೆಯಲ್ಲೇ ಬೆಟ್ಟಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಬೆಟ್ಟಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…