ಚಾಮರಾಜನಗರ

ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸದಿರಲಿ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪೊನ್ನಾಚಿ ಗ್ರಾಮದ ಶಿವಣ್ಣ ಮಾತನಾಡಿ, ಮಲೆ ಮಹದೇಶ್ವರ ವನ್ಯಜೀವಿಧಾಮವು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಜನರ ಜೀವನ ದುಸ್ತರವಾಗಲಿದೆ. ನಮ್ಮ ಸಾಂಪ್ರದಾಯಿಕ ಆಚರಣೆಗಳೆಲ್ಲವೂ ಮರೆಯಾಗಲಿವೆ. ಜೊತೆಗೆ ಸಮುದಾಯದ ಕಟ್ಟುಪಾಡಿನಿಂದ ಹೊರ ಬರಬೇಕಾಗುತ್ತದೆ. ಅರಣ್ಯದಂಚಿನ ಕುಗ್ರಾಮದಲ್ಲಿ ವಾಸ ಮಾಡುತ್ತಿರುವ ನಾವುಗಳು, ಜಾನುವಾರುಗಳನ್ನು ನಂಬಿ ಬದುಕುತ್ತಿದ್ದೇವೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಅರಣ್ಯದೊಳಗೆ ಜಾನುವಾರುಗಳನ್ನು ನಿರ್ಬಂಧಿಸಲಾಗುವುದು. ಕಾಡಂಚಿನ ಪ್ರದೇಶಗಳಲ್ಲಿ ದೇವಾಲಯಗಳು ಇದ್ದು, ಅಲ್ಲಿಗೆ ನಿರ್ಬಂಧ ಹೇರುತ್ತಾರೆ. ಅಂತಹ ಸಂದರ್ಭಗಳಲ್ಲಿ ನಾವು ಏನು ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಮ್ಮ ಭಾವನೆಗೆ ಧಕ್ಕೆ ಆಗುತ್ತದೆ. ಹಾಗಾಗಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ:-ನಾಳೆಯಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

ಸ್ಥಳೀಯ ಮಟ್ಟದ ವರದಿ ನೀಡಿ
ಸರ್ಕಾರದ ಮಟ್ಟಕ್ಕೆ ಅಧಿಕಾರಿಗಳು ಸ್ಥಳೀಯವಾಗಿ ವರದಿ ಪಡೆದು, ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಜನರ ಅಭಿಪ್ರಾಯ ಪಡೆದು ಅನಂತರ ಸರ್ಕಾರದ ಮಟ್ಟಕ್ಕೆ ವರದಿ ನೀಡಬೇಕು. ಅದ್ಯಾವ ಕೆಲಸವೂ ಆಗದೆ ಅಧಿಕಾರಿಗಳು ನೇರವಾಗಿ ವರದಿಯನ್ನು ನೀಡಿರುವುದು ಖಂಡನೀಯ. ಹಾಗಾಗಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು ಎಂದರು.

ಪ್ರತಿಭಟನೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ವತಿಯಿಂದ ಮುಂಜಾಗ್ರತವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಅರಣ್ಯ ಇಲಾಖೆಯ ಅಧಿಕಾರಿಗಳು, ಪೊನ್ನಾಚಿ ಮಣಿಗಾರ ಪಿ. ಕೆ .ಬಸವರಾಜ್, ಗೌಡ್ರು ಶಿವಣ್ಣ, ಪೊನ್ನಾಚಿ ಸ್ನೇಹ ಜೀವಿ ರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಕೇಶವಮೂರ್ತಿ, ಶಿವಬಸಪ್ಪ, ಪಿ.ಕೆ.ಬಾಲಸುಬ್ರಹ್ಮಣ್ಯ, ರಂಗಮಾದಪ್ಪ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

26 mins ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

28 mins ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

30 mins ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

32 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

35 mins ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

1 hour ago