ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪೊನ್ನಾಚಿ ಗ್ರಾಮದ ಶಿವಣ್ಣ ಮಾತನಾಡಿ, ಮಲೆ ಮಹದೇಶ್ವರ ವನ್ಯಜೀವಿಧಾಮವು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಜನರ ಜೀವನ ದುಸ್ತರವಾಗಲಿದೆ. ನಮ್ಮ ಸಾಂಪ್ರದಾಯಿಕ ಆಚರಣೆಗಳೆಲ್ಲವೂ ಮರೆಯಾಗಲಿವೆ. ಜೊತೆಗೆ ಸಮುದಾಯದ ಕಟ್ಟುಪಾಡಿನಿಂದ ಹೊರ ಬರಬೇಕಾಗುತ್ತದೆ. ಅರಣ್ಯದಂಚಿನ ಕುಗ್ರಾಮದಲ್ಲಿ ವಾಸ ಮಾಡುತ್ತಿರುವ ನಾವುಗಳು, ಜಾನುವಾರುಗಳನ್ನು ನಂಬಿ ಬದುಕುತ್ತಿದ್ದೇವೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಅರಣ್ಯದೊಳಗೆ ಜಾನುವಾರುಗಳನ್ನು ನಿರ್ಬಂಧಿಸಲಾಗುವುದು. ಕಾಡಂಚಿನ ಪ್ರದೇಶಗಳಲ್ಲಿ ದೇವಾಲಯಗಳು ಇದ್ದು, ಅಲ್ಲಿಗೆ ನಿರ್ಬಂಧ ಹೇರುತ್ತಾರೆ. ಅಂತಹ ಸಂದರ್ಭಗಳಲ್ಲಿ ನಾವು ಏನು ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಮ್ಮ ಭಾವನೆಗೆ ಧಕ್ಕೆ ಆಗುತ್ತದೆ. ಹಾಗಾಗಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಮನವಿ ಮಾಡಿದರು.
ಇದನ್ನೂ ಓದಿ:-ನಾಳೆಯಿಂದ 5 ದಿನಗಳ ಕಾಲ ಕೆಆರ್ಎಸ್ನಲ್ಲಿ ಕಾವೇರಿ ಆರತಿ
ಸ್ಥಳೀಯ ಮಟ್ಟದ ವರದಿ ನೀಡಿ
ಸರ್ಕಾರದ ಮಟ್ಟಕ್ಕೆ ಅಧಿಕಾರಿಗಳು ಸ್ಥಳೀಯವಾಗಿ ವರದಿ ಪಡೆದು, ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಜನರ ಅಭಿಪ್ರಾಯ ಪಡೆದು ಅನಂತರ ಸರ್ಕಾರದ ಮಟ್ಟಕ್ಕೆ ವರದಿ ನೀಡಬೇಕು. ಅದ್ಯಾವ ಕೆಲಸವೂ ಆಗದೆ ಅಧಿಕಾರಿಗಳು ನೇರವಾಗಿ ವರದಿಯನ್ನು ನೀಡಿರುವುದು ಖಂಡನೀಯ. ಹಾಗಾಗಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು ಎಂದರು.
ಪ್ರತಿಭಟನೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ವತಿಯಿಂದ ಮುಂಜಾಗ್ರತವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಅರಣ್ಯ ಇಲಾಖೆಯ ಅಧಿಕಾರಿಗಳು, ಪೊನ್ನಾಚಿ ಮಣಿಗಾರ ಪಿ. ಕೆ .ಬಸವರಾಜ್, ಗೌಡ್ರು ಶಿವಣ್ಣ, ಪೊನ್ನಾಚಿ ಸ್ನೇಹ ಜೀವಿ ರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಕೇಶವಮೂರ್ತಿ, ಶಿವಬಸಪ್ಪ, ಪಿ.ಕೆ.ಬಾಲಸುಬ್ರಹ್ಮಣ್ಯ, ರಂಗಮಾದಪ್ಪ ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…