ಚಾಮರಾಜನಗರ

ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸದಿರಲಿ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪೊನ್ನಾಚಿ ಗ್ರಾಮದ ಶಿವಣ್ಣ ಮಾತನಾಡಿ, ಮಲೆ ಮಹದೇಶ್ವರ ವನ್ಯಜೀವಿಧಾಮವು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಜನರ ಜೀವನ ದುಸ್ತರವಾಗಲಿದೆ. ನಮ್ಮ ಸಾಂಪ್ರದಾಯಿಕ ಆಚರಣೆಗಳೆಲ್ಲವೂ ಮರೆಯಾಗಲಿವೆ. ಜೊತೆಗೆ ಸಮುದಾಯದ ಕಟ್ಟುಪಾಡಿನಿಂದ ಹೊರ ಬರಬೇಕಾಗುತ್ತದೆ. ಅರಣ್ಯದಂಚಿನ ಕುಗ್ರಾಮದಲ್ಲಿ ವಾಸ ಮಾಡುತ್ತಿರುವ ನಾವುಗಳು, ಜಾನುವಾರುಗಳನ್ನು ನಂಬಿ ಬದುಕುತ್ತಿದ್ದೇವೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಅರಣ್ಯದೊಳಗೆ ಜಾನುವಾರುಗಳನ್ನು ನಿರ್ಬಂಧಿಸಲಾಗುವುದು. ಕಾಡಂಚಿನ ಪ್ರದೇಶಗಳಲ್ಲಿ ದೇವಾಲಯಗಳು ಇದ್ದು, ಅಲ್ಲಿಗೆ ನಿರ್ಬಂಧ ಹೇರುತ್ತಾರೆ. ಅಂತಹ ಸಂದರ್ಭಗಳಲ್ಲಿ ನಾವು ಏನು ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಮ್ಮ ಭಾವನೆಗೆ ಧಕ್ಕೆ ಆಗುತ್ತದೆ. ಹಾಗಾಗಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ:-ನಾಳೆಯಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

ಸ್ಥಳೀಯ ಮಟ್ಟದ ವರದಿ ನೀಡಿ
ಸರ್ಕಾರದ ಮಟ್ಟಕ್ಕೆ ಅಧಿಕಾರಿಗಳು ಸ್ಥಳೀಯವಾಗಿ ವರದಿ ಪಡೆದು, ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಜನರ ಅಭಿಪ್ರಾಯ ಪಡೆದು ಅನಂತರ ಸರ್ಕಾರದ ಮಟ್ಟಕ್ಕೆ ವರದಿ ನೀಡಬೇಕು. ಅದ್ಯಾವ ಕೆಲಸವೂ ಆಗದೆ ಅಧಿಕಾರಿಗಳು ನೇರವಾಗಿ ವರದಿಯನ್ನು ನೀಡಿರುವುದು ಖಂಡನೀಯ. ಹಾಗಾಗಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು ಎಂದರು.

ಪ್ರತಿಭಟನೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ವತಿಯಿಂದ ಮುಂಜಾಗ್ರತವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಅರಣ್ಯ ಇಲಾಖೆಯ ಅಧಿಕಾರಿಗಳು, ಪೊನ್ನಾಚಿ ಮಣಿಗಾರ ಪಿ. ಕೆ .ಬಸವರಾಜ್, ಗೌಡ್ರು ಶಿವಣ್ಣ, ಪೊನ್ನಾಚಿ ಸ್ನೇಹ ಜೀವಿ ರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಕೇಶವಮೂರ್ತಿ, ಶಿವಬಸಪ್ಪ, ಪಿ.ಕೆ.ಬಾಲಸುಬ್ರಹ್ಮಣ್ಯ, ರಂಗಮಾದಪ್ಪ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

40 mins ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

1 hour ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

2 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

4 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

4 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

4 hours ago