ಚಾಮರಾಜನಗರ

ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸದಿರಲಿ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪೊನ್ನಾಚಿ ಗ್ರಾಮದ ಶಿವಣ್ಣ ಮಾತನಾಡಿ, ಮಲೆ ಮಹದೇಶ್ವರ ವನ್ಯಜೀವಿಧಾಮವು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಜನರ ಜೀವನ ದುಸ್ತರವಾಗಲಿದೆ. ನಮ್ಮ ಸಾಂಪ್ರದಾಯಿಕ ಆಚರಣೆಗಳೆಲ್ಲವೂ ಮರೆಯಾಗಲಿವೆ. ಜೊತೆಗೆ ಸಮುದಾಯದ ಕಟ್ಟುಪಾಡಿನಿಂದ ಹೊರ ಬರಬೇಕಾಗುತ್ತದೆ. ಅರಣ್ಯದಂಚಿನ ಕುಗ್ರಾಮದಲ್ಲಿ ವಾಸ ಮಾಡುತ್ತಿರುವ ನಾವುಗಳು, ಜಾನುವಾರುಗಳನ್ನು ನಂಬಿ ಬದುಕುತ್ತಿದ್ದೇವೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಅರಣ್ಯದೊಳಗೆ ಜಾನುವಾರುಗಳನ್ನು ನಿರ್ಬಂಧಿಸಲಾಗುವುದು. ಕಾಡಂಚಿನ ಪ್ರದೇಶಗಳಲ್ಲಿ ದೇವಾಲಯಗಳು ಇದ್ದು, ಅಲ್ಲಿಗೆ ನಿರ್ಬಂಧ ಹೇರುತ್ತಾರೆ. ಅಂತಹ ಸಂದರ್ಭಗಳಲ್ಲಿ ನಾವು ಏನು ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಮ್ಮ ಭಾವನೆಗೆ ಧಕ್ಕೆ ಆಗುತ್ತದೆ. ಹಾಗಾಗಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ:-ನಾಳೆಯಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

ಸ್ಥಳೀಯ ಮಟ್ಟದ ವರದಿ ನೀಡಿ
ಸರ್ಕಾರದ ಮಟ್ಟಕ್ಕೆ ಅಧಿಕಾರಿಗಳು ಸ್ಥಳೀಯವಾಗಿ ವರದಿ ಪಡೆದು, ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಜನರ ಅಭಿಪ್ರಾಯ ಪಡೆದು ಅನಂತರ ಸರ್ಕಾರದ ಮಟ್ಟಕ್ಕೆ ವರದಿ ನೀಡಬೇಕು. ಅದ್ಯಾವ ಕೆಲಸವೂ ಆಗದೆ ಅಧಿಕಾರಿಗಳು ನೇರವಾಗಿ ವರದಿಯನ್ನು ನೀಡಿರುವುದು ಖಂಡನೀಯ. ಹಾಗಾಗಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು ಎಂದರು.

ಪ್ರತಿಭಟನೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ವತಿಯಿಂದ ಮುಂಜಾಗ್ರತವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಅರಣ್ಯ ಇಲಾಖೆಯ ಅಧಿಕಾರಿಗಳು, ಪೊನ್ನಾಚಿ ಮಣಿಗಾರ ಪಿ. ಕೆ .ಬಸವರಾಜ್, ಗೌಡ್ರು ಶಿವಣ್ಣ, ಪೊನ್ನಾಚಿ ಸ್ನೇಹ ಜೀವಿ ರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಕೇಶವಮೂರ್ತಿ, ಶಿವಬಸಪ್ಪ, ಪಿ.ಕೆ.ಬಾಲಸುಬ್ರಹ್ಮಣ್ಯ, ರಂಗಮಾದಪ್ಪ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago