ಚಾಮರಾಜನಗರ

ಹಣ ದ್ವಿಗುಣ ಆಮಿಷ ; ವ್ಯಕ್ತಿಗೆ ವಂಚನೆ, ಏಳು ಮಂದಿ ವಿರುದ್ದ ದೂರು

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ 7 ಜನರ ವಿರುದ್ಧ ದೂರು ನೀಡಿದ್ದಾರೆ.

ಸಚ್ಚಿದಾನಂದ ಗಾರ್ಮೆಂಟ್ಸ್ ವ್ಯಾಪಾರಿಯಾಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಈತನಿಗೆ ಅನ್ಸಾರಿ ಎಂಬ ವ್ಯಕ್ತಿ ಪರಿಚಯವಾಗಿದ್ದ. ಈತ ನಿಮ್ಮ ಹಣವನ್ನು ಡಬಲ್ ಮಾಡಿಕೊಡುತ್ತೇವೆ ಎಂದು ಸಚ್ಚಿದಾನಂದ ಅವರನ್ನು ನಂಬಿಸಿ ನಗರಕ್ಕೆ ಬರಲು ಹೇಳಿದ್ದಾನೆ. ಅನ್ಸಾರಿಯ ಮಾತನ್ನು ನಂಬಿದ ಸಚ್ಚಿದಾನಂದ 3 ಲಕ್ಷ ರೂ. ಹಣ ತೆಗೆದುಕೊಂಡು ನಗರದ ಖಾಸಗಿ ಹೊಟೇಲ್‌ಗೆ ಆಗಮಿಸಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.

ಈ ರೂಂ ಗೆ ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿಯೊಡನೆ ಇತರೆ ನಾಲ್ಕು ಮಂದಿ ಬಂದು ಸಚ್ಚಿದಾನಂದರನ್ನು ಹೆದರಿಸಿದ್ದಾರೆ. ನೀನು ಕಾನೂನು ಬಾಹಿರ ಚಟುವಟಿಕೆಯಲ್ಲಿ ಬಾಗಿಯಾಗಿದ್ದೀಯ ನಿನ್ನನ್ನು ಬಂಧಿಸುತ್ತೇವೆ ಎಂದು ಹೇಳಿ ಆತನ ಬಳಿ ಇದ್ದ 3 ಲಕ್ಷ ರೂ.ಗಳನ್ನು ಕಿತ್ತುಕೊಂಡಿದ್ದಾರೆ. ನಿನ್ನ ಮೇಲೆ ಕೇಸ್ ಮಾಡಬಾರದು ಎಂದರೆ ಇನ್ನೂ ಒಂದು ಲಕ್ಷ ರೂ.ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಸಚ್ಚಿದಾನಂದ ಸೈಯದ್ ಇಮ್ರಾನ್ ಎಂಬುವವರ ಖಾತೆಗೆ 70 ಸಾವಿರ ರೂ.ಗಳನ್ನು ಕಳುಹಿಸಿದಾಗ ನನ್ನನ್ನು ಬಿಟ್ಟು ಕಳುಹಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

7 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

8 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

9 hours ago