ಚಾಮರಾಜನಗರ

ಹಣ ದ್ವಿಗುಣ ಆಮಿಷ ; ವ್ಯಕ್ತಿಗೆ ವಂಚನೆ, ಏಳು ಮಂದಿ ವಿರುದ್ದ ದೂರು

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ 7 ಜನರ ವಿರುದ್ಧ ದೂರು ನೀಡಿದ್ದಾರೆ.

ಸಚ್ಚಿದಾನಂದ ಗಾರ್ಮೆಂಟ್ಸ್ ವ್ಯಾಪಾರಿಯಾಗಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಈತನಿಗೆ ಅನ್ಸಾರಿ ಎಂಬ ವ್ಯಕ್ತಿ ಪರಿಚಯವಾಗಿದ್ದ. ಈತ ನಿಮ್ಮ ಹಣವನ್ನು ಡಬಲ್ ಮಾಡಿಕೊಡುತ್ತೇವೆ ಎಂದು ಸಚ್ಚಿದಾನಂದ ಅವರನ್ನು ನಂಬಿಸಿ ನಗರಕ್ಕೆ ಬರಲು ಹೇಳಿದ್ದಾನೆ. ಅನ್ಸಾರಿಯ ಮಾತನ್ನು ನಂಬಿದ ಸಚ್ಚಿದಾನಂದ 3 ಲಕ್ಷ ರೂ. ಹಣ ತೆಗೆದುಕೊಂಡು ನಗರದ ಖಾಸಗಿ ಹೊಟೇಲ್‌ಗೆ ಆಗಮಿಸಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.

ಈ ರೂಂ ಗೆ ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿಯೊಡನೆ ಇತರೆ ನಾಲ್ಕು ಮಂದಿ ಬಂದು ಸಚ್ಚಿದಾನಂದರನ್ನು ಹೆದರಿಸಿದ್ದಾರೆ. ನೀನು ಕಾನೂನು ಬಾಹಿರ ಚಟುವಟಿಕೆಯಲ್ಲಿ ಬಾಗಿಯಾಗಿದ್ದೀಯ ನಿನ್ನನ್ನು ಬಂಧಿಸುತ್ತೇವೆ ಎಂದು ಹೇಳಿ ಆತನ ಬಳಿ ಇದ್ದ 3 ಲಕ್ಷ ರೂ.ಗಳನ್ನು ಕಿತ್ತುಕೊಂಡಿದ್ದಾರೆ. ನಿನ್ನ ಮೇಲೆ ಕೇಸ್ ಮಾಡಬಾರದು ಎಂದರೆ ಇನ್ನೂ ಒಂದು ಲಕ್ಷ ರೂ.ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಸಚ್ಚಿದಾನಂದ ಸೈಯದ್ ಇಮ್ರಾನ್ ಎಂಬುವವರ ಖಾತೆಗೆ 70 ಸಾವಿರ ರೂ.ಗಳನ್ನು ಕಳುಹಿಸಿದಾಗ ನನ್ನನ್ನು ಬಿಟ್ಟು ಕಳುಹಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago