ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಈತ ಹನೂರು ತಾಲ್ಲೂಕು ಪಂಚಾಯಿತಿಯಲ್ಲಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದ.
ಆರೋಪಿ ಆನಂದ್, ಜಮಖಂಡಿ ತಾಲ್ಲೂಕಿನ ಆಲಬಾಳು ಗ್ರಾಮದ ವಿದ್ಯಾಶ್ರೀ ಎಂಬುವವರನ್ನು 2019ರಲ್ಲಿ ವಿವಾಹವಾಗಿದ್ದ. ಬಳಿಕ ಕೊಳ್ಳೇಗಾಲ ಟೌನ್ನ ಬಸ್ತಿಪುರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ವಿದ್ಯಾಶ್ರೀ ಹಾಗೂ 7 ತಿಂಗಳ ಮಗುವಿನೊಂದಿಗೆ ವಾಸವಿದ್ದ.
ದಿನ ಕಳೆದಂತೆ ಪತ್ನಿಯ ಜೊತೆ ರಂಪಾಟ ಶುರು ಮಾಡಿದ್ದ ಆನಂದ್, ತವರು ಮನೆಯಿಂದ 2 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಪದೇ ಪದೇ ಕಾಟ ಕೊಡುತ್ತಿದ್ದ. ಬಳಿಕ 2022ರ ಮಾರ್ಚ್ 14ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ನೇತು ಹಾಕಿದ್ದ.
ಈ ಬಗ್ಗೆ ಕೊಳ್ಳೇಗಾಲ ಟೌನ್ ಠಾಣೆ ಪೊಲೀಸರು ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆನಂದ್ ಶ್ಯಾಮ್ ಕಾಂಬಳೆಯನ್ನು ದೋಷಿ ಎಂದು ಪರಿಗಣಿಸಿ ಕೋರ್ಟ್ ತೀರ್ಪು ನೀಡಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…