ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಈತ ಹನೂರು ತಾಲ್ಲೂಕು ಪಂಚಾಯಿತಿಯಲ್ಲಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದ.
ಆರೋಪಿ ಆನಂದ್, ಜಮಖಂಡಿ ತಾಲ್ಲೂಕಿನ ಆಲಬಾಳು ಗ್ರಾಮದ ವಿದ್ಯಾಶ್ರೀ ಎಂಬುವವರನ್ನು 2019ರಲ್ಲಿ ವಿವಾಹವಾಗಿದ್ದ. ಬಳಿಕ ಕೊಳ್ಳೇಗಾಲ ಟೌನ್ನ ಬಸ್ತಿಪುರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ವಿದ್ಯಾಶ್ರೀ ಹಾಗೂ 7 ತಿಂಗಳ ಮಗುವಿನೊಂದಿಗೆ ವಾಸವಿದ್ದ.
ದಿನ ಕಳೆದಂತೆ ಪತ್ನಿಯ ಜೊತೆ ರಂಪಾಟ ಶುರು ಮಾಡಿದ್ದ ಆನಂದ್, ತವರು ಮನೆಯಿಂದ 2 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಪದೇ ಪದೇ ಕಾಟ ಕೊಡುತ್ತಿದ್ದ. ಬಳಿಕ 2022ರ ಮಾರ್ಚ್ 14ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ನೇತು ಹಾಕಿದ್ದ.
ಈ ಬಗ್ಗೆ ಕೊಳ್ಳೇಗಾಲ ಟೌನ್ ಠಾಣೆ ಪೊಲೀಸರು ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆನಂದ್ ಶ್ಯಾಮ್ ಕಾಂಬಳೆಯನ್ನು ದೋಷಿ ಎಂದು ಪರಿಗಣಿಸಿ ಕೋರ್ಟ್ ತೀರ್ಪು ನೀಡಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…