ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಈತ ಹನೂರು ತಾಲ್ಲೂಕು ಪಂಚಾಯಿತಿಯಲ್ಲಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದ.
ಆರೋಪಿ ಆನಂದ್, ಜಮಖಂಡಿ ತಾಲ್ಲೂಕಿನ ಆಲಬಾಳು ಗ್ರಾಮದ ವಿದ್ಯಾಶ್ರೀ ಎಂಬುವವರನ್ನು 2019ರಲ್ಲಿ ವಿವಾಹವಾಗಿದ್ದ. ಬಳಿಕ ಕೊಳ್ಳೇಗಾಲ ಟೌನ್ನ ಬಸ್ತಿಪುರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ವಿದ್ಯಾಶ್ರೀ ಹಾಗೂ 7 ತಿಂಗಳ ಮಗುವಿನೊಂದಿಗೆ ವಾಸವಿದ್ದ.
ದಿನ ಕಳೆದಂತೆ ಪತ್ನಿಯ ಜೊತೆ ರಂಪಾಟ ಶುರು ಮಾಡಿದ್ದ ಆನಂದ್, ತವರು ಮನೆಯಿಂದ 2 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಪದೇ ಪದೇ ಕಾಟ ಕೊಡುತ್ತಿದ್ದ. ಬಳಿಕ 2022ರ ಮಾರ್ಚ್ 14ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ನೇತು ಹಾಕಿದ್ದ.
ಈ ಬಗ್ಗೆ ಕೊಳ್ಳೇಗಾಲ ಟೌನ್ ಠಾಣೆ ಪೊಲೀಸರು ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆನಂದ್ ಶ್ಯಾಮ್ ಕಾಂಬಳೆಯನ್ನು ದೋಷಿ ಎಂದು ಪರಿಗಣಿಸಿ ಕೋರ್ಟ್ ತೀರ್ಪು ನೀಡಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…