Mysore
23
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಿಜಿ ಪಾಳ್ಯ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಕ್ರಿಶ್ಚಿಯನ್ ಸಮುದಾಯದ ಬಡಾವಣೆಯಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೇ ಇರುವುದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

ಈ ಸಂಬಂಧ ಕಳೆದ ವರ್ಷವೂ ಸಹ ನಮ್ಮ ಕ್ರಿಶ್ಚಿಯನ್ ಸಮುದಾಯದ ಬಡಾವಣೆಗೆ ಕೊಳವೆ ಬಾವಿ ಒರೆಸುವಂತೆ ಮನವಿ ಮಾಡಲಾಗಿತ್ತು. ಆದರೂ ಕೊಳವೆಬಾವಿ ಕೂರೆಸಲಿಲ್ಲ. ಇದೀಗ ಮತ್ತೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ನಮ್ಮ ಸಮಸ್ಯೆಯನ್ನು ಆಲಿಸುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಇನ್ನು ಗ್ರಾಮದ ಮಹಿಳೆಯರು ಮಾತನಾಡಿ, ನಮ್ಮ ಕ್ರಿಶ್ಚಿಯನ್ ಸಮುದಾಯದ ಬಡಾವಣೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತಭಿಕ್ಷೆಗಾಗಿ ಎಲ್ಲರೂ ಮನೆ ಬಳಿ ಬರುತ್ತಾರೆ. ಆದರೆ ಇದೀಗ ಸಮಸ್ಯೆಯನ್ನು ಆಲಿಸುವವರು ಯಾರು ಇಲ್ಲ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಚುನಾವಣೆಯಲ್ಲಿ ಪ್ರತಿಯೊಬ್ಬರು ನಮಗೆ ಮತ ನೀಡಿ ಎಂದು ಮನವಿ ಮಾಡುತ್ತೀರಾ, ಕುಡಿಯಲು ನೀರು ಇಲ್ಲದೆ ಪ್ರತಿದಿನ ತೊಂದರೆ ಅನುಭವಿಸುತ್ತಿದ್ದೇವೆ. ಬಟ್ಟೆ ಒಗೆಯಲು, ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳಾದವರು ಕಷ್ಟದ ಸಂದರ್ಭದಲ್ಲಿ ಸಮಸ್ಯೆಗೆ ಧ್ವನಿಯಾಗಬೇಕು. ಆದರೆ ಜನಪ್ರತಿನಿಧಿಗಳು ನಾವು ಬದುಕಿದ್ದೆವೋ ಸತ್ತಿದ್ದೇವೋ ಎಂಬುದನ್ನು ಯಾರು ಕೇಳುತ್ತಿಲ್ಲ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕು. ನಾವು ಕುಡಿಯುವ ನೀರನ್ನು ಮಾತ್ರ ಕೇಳುತ್ತಿದ್ದೇವೆ. ಬೇರೇನು ಕೇಳುತ್ತಿಲ್ಲ. ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು

 

Tags:
error: Content is protected !!