ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಿಜಿ ಪಾಳ್ಯ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಕ್ರಿಶ್ಚಿಯನ್ ಸಮುದಾಯದ ಬಡಾವಣೆಯಲ್ಲಿ ಕಳೆದ ಹಲವಾರು ತಿಂಗಳಿನಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೇ ಇರುವುದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.
ಈ ಸಂಬಂಧ ಕಳೆದ ವರ್ಷವೂ ಸಹ ನಮ್ಮ ಕ್ರಿಶ್ಚಿಯನ್ ಸಮುದಾಯದ ಬಡಾವಣೆಗೆ ಕೊಳವೆ ಬಾವಿ ಒರೆಸುವಂತೆ ಮನವಿ ಮಾಡಲಾಗಿತ್ತು. ಆದರೂ ಕೊಳವೆಬಾವಿ ಕೂರೆಸಲಿಲ್ಲ. ಇದೀಗ ಮತ್ತೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ನಮ್ಮ ಸಮಸ್ಯೆಯನ್ನು ಆಲಿಸುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಇನ್ನು ಗ್ರಾಮದ ಮಹಿಳೆಯರು ಮಾತನಾಡಿ, ನಮ್ಮ ಕ್ರಿಶ್ಚಿಯನ್ ಸಮುದಾಯದ ಬಡಾವಣೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತಭಿಕ್ಷೆಗಾಗಿ ಎಲ್ಲರೂ ಮನೆ ಬಳಿ ಬರುತ್ತಾರೆ. ಆದರೆ ಇದೀಗ ಸಮಸ್ಯೆಯನ್ನು ಆಲಿಸುವವರು ಯಾರು ಇಲ್ಲ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಯಲ್ಲಿ ಪ್ರತಿಯೊಬ್ಬರು ನಮಗೆ ಮತ ನೀಡಿ ಎಂದು ಮನವಿ ಮಾಡುತ್ತೀರಾ, ಕುಡಿಯಲು ನೀರು ಇಲ್ಲದೆ ಪ್ರತಿದಿನ ತೊಂದರೆ ಅನುಭವಿಸುತ್ತಿದ್ದೇವೆ. ಬಟ್ಟೆ ಒಗೆಯಲು, ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳಾದವರು ಕಷ್ಟದ ಸಂದರ್ಭದಲ್ಲಿ ಸಮಸ್ಯೆಗೆ ಧ್ವನಿಯಾಗಬೇಕು. ಆದರೆ ಜನಪ್ರತಿನಿಧಿಗಳು ನಾವು ಬದುಕಿದ್ದೆವೋ ಸತ್ತಿದ್ದೇವೋ ಎಂಬುದನ್ನು ಯಾರು ಕೇಳುತ್ತಿಲ್ಲ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕು. ನಾವು ಕುಡಿಯುವ ನೀರನ್ನು ಮಾತ್ರ ಕೇಳುತ್ತಿದ್ದೇವೆ. ಬೇರೇನು ಕೇಳುತ್ತಿಲ್ಲ. ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…