ಚಾಮರಾಜನಗರ

ಚಾಲನೆ ಮಾಡುವಾಗಲೇ ಚಾಲಕನಿಗೆ ಕಾಣಿಸಿಕೊಂಡ ಮೂರ್ಛೆರೋಗ: ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ.

ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ ಬಸ್ ಚಾಲಕ ಕಬ್ಬಳ್ಳಿ ಗ್ರಾಮದ ಸುಭಾಷ್ ಎಂಬುವವರು ಚಾಲನೆ ಮಾಡುತ್ತಿದ್ದಾಗ ಅವರಿಗೆ ಏಕಾಏಕಿ ಮೂರ್ಚೆ ಕಾಣಿಸಿಕೊಂಡು ಕೆಳಗೆ ಬಿದ್ದಿದ್ದಾರೆ. ಪರಿಣಾಮ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತುಕೊಂಡಿದೆ. ಆದರೆ ಈ ಸಮಯದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಇರುವುದರಿಂದ ದೊಡ್ಡ ಅನಾಹುತ ತಪ್ಪಿದೆ.

ಇದಲ್ಲದೆ ಬಸ್ಸಲ್ಲಿದ್ದ ಓರ್ವ ಪ್ರಯಾಣಿಕರು ಹಾಗೂ ನಿರ್ವಾಹಕರು ಮಾತ್ರ ಇದ್ದಿದ್ದರಿಂದ ಯಾವುದೇ ಗಾಯಗಳಾಗಿಲ್ಲ. ಪ್ರತಿದಿನ ಈ ಮಾರ್ಗವಾಗಿ ಸುಮಾರು 40ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಸಂಚಾರ ಮಾಡುತ್ತಿದ್ದರು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇತ್ತು. ಆದ್ದರಿಂದ ಯಾವೊಬ್ಬ ವಿದ್ಯಾರ್ಥಿಗಳು ಆಗಮಿಸಿರಲಿಲ್ಲ. ಇದರಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಇನ್ನು ಚಾಲಕ ಸುಭಾಷ್ ಎಂಬುವವರು ಕಳೆದ 12 ವರ್ಷಗಳಿಂದ ಸಂಸ್ಥೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಎರಡು ಅಪಘಾತ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದಲ್ಲದೆ ಇವರಿಗೆ ಅನಾರೋಗ್ಯ ಸಮಸ್ಯೆ ಇರುವುದರಿಂದ ಬೇರೆ ಜವಾಬ್ದಾರಿ ನೀಡುವ ಬದಲು ಚಾಲಕನ ಹುದ್ದೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನು ಮುಂದಾದರೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಆರೋಗ್ಯವಂತ ಚಾಲಕರನ್ನು ನೇಮಕ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸದ್ಯ ಚಾಲಕ ಸುಭಾಷ್ ಮೂರ್ಛೆ ರೋಗ ಕಾಣಿಸಿಕೊಂಡ ಪರಿಣಾಮ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರು ಚೇತರಿಸಿಕೊಂಡ ಬಂದ ನಂತರ ಇವರಿಗೆ ಬಸ್ ಚಾಲನೆ ಮಾಡಲು ಅವಕಾಶ ನೀಡದೆ ಬೇರೆ ಜವಾಬ್ದಾರಿ ನೀಡಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

24 mins ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

55 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

1 hour ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

2 hours ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

6 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

6 hours ago