ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು.
ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, ಕುಲಗಾಣ ಗ್ರಾಮದ ತಿರುಪತಿ ನಾಯಕರ ಸೇವಂತಿ ಫಸಲು, ಶೀಗೆವಾಡಿ ಗ್ರಾಮದ ಮರಿದಾಸನಾಯಕ ಅವರ ಹತ್ತಿ ಫಸಲನ್ನು ವೀಕ್ಷಿಸಿದರು.
ಮೂಡ್ನಾಕೂಡು ಗ್ರಾಮದ ನಾಗೇಶ್ ಅವರ ಬಾಳೆ ತೋಟ ಪರಿಶೀಲನೆ ನಡೆಸಿದರು. ಗಾಳಿ ಮಳೆಗೆ ಬಾಳೆ ಫಸಲು ನೆಲಕ್ಕೆ ಒರಗಿರುವುದನ್ನು ಗಮನಿಸಿದರು.
ಮುಂಗಾರು ಮಳೆ ಬೀಳದೆ ಜೋಳ, ಹತ್ತಿ, ನೆಲಗಡಲೆ ಫಸಲು ಒಣಗಿ ನಷ್ಟವಾಗಿದೆ ಎಂದು ರೈತರು ದೂರಿದರು.
ಸರಿಯಾಗಿ ವಿದ್ಯುತ್ ನೀಡದೆ ಬಾಳೆ, ತರಕಾರಿ ಫಸಲು ಹಾನಿಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಭೇಟಿ ನೀಡಿ ಪರಿಶೀಲಿಸಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದರೂ ಏನು ಪ್ರಯೋಜನವಿಲ್ಲ ಎಂದು ರೈತರು ತಂಡದ ಗಮನಕ್ಕೆ ತಂದರು.
ತಂಡದಲ್ಲಿ ಶಾಸಕ ಶ್ರೀವತ್ಸ, ಡಾ.ನವೀನ್ ಕುಮಾರ್, ಮಾಜಿ ಶಾಸಕರಾದ ಎನ್.ಮಹೇಶ್, ಎಸ್. ಬಾಲರಾಜ್, ಸಿ.ಎಸ್.ನಿರಂಜನಕುಮಾರ್, ಹರ್ಷವರ್ಧನ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಬಿಜೆಪಿ ಜಿಲ್ಲಾಧ್ತಕ್ಷ ನಾರಾಯಣಪ್ರಸಾದ್, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ ಟಿ ಮೋರ್ಚಾ ಅಧ್ಯಕ್ಷ ಜಯಸುಂದರ್ ಇತರರಿದ್ದರು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…