ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು.
ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, ಕುಲಗಾಣ ಗ್ರಾಮದ ತಿರುಪತಿ ನಾಯಕರ ಸೇವಂತಿ ಫಸಲು, ಶೀಗೆವಾಡಿ ಗ್ರಾಮದ ಮರಿದಾಸನಾಯಕ ಅವರ ಹತ್ತಿ ಫಸಲನ್ನು ವೀಕ್ಷಿಸಿದರು.
ಮೂಡ್ನಾಕೂಡು ಗ್ರಾಮದ ನಾಗೇಶ್ ಅವರ ಬಾಳೆ ತೋಟ ಪರಿಶೀಲನೆ ನಡೆಸಿದರು. ಗಾಳಿ ಮಳೆಗೆ ಬಾಳೆ ಫಸಲು ನೆಲಕ್ಕೆ ಒರಗಿರುವುದನ್ನು ಗಮನಿಸಿದರು.
ಮುಂಗಾರು ಮಳೆ ಬೀಳದೆ ಜೋಳ, ಹತ್ತಿ, ನೆಲಗಡಲೆ ಫಸಲು ಒಣಗಿ ನಷ್ಟವಾಗಿದೆ ಎಂದು ರೈತರು ದೂರಿದರು.
ಸರಿಯಾಗಿ ವಿದ್ಯುತ್ ನೀಡದೆ ಬಾಳೆ, ತರಕಾರಿ ಫಸಲು ಹಾನಿಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಭೇಟಿ ನೀಡಿ ಪರಿಶೀಲಿಸಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದರೂ ಏನು ಪ್ರಯೋಜನವಿಲ್ಲ ಎಂದು ರೈತರು ತಂಡದ ಗಮನಕ್ಕೆ ತಂದರು.
ತಂಡದಲ್ಲಿ ಶಾಸಕ ಶ್ರೀವತ್ಸ, ಡಾ.ನವೀನ್ ಕುಮಾರ್, ಮಾಜಿ ಶಾಸಕರಾದ ಎನ್.ಮಹೇಶ್, ಎಸ್. ಬಾಲರಾಜ್, ಸಿ.ಎಸ್.ನಿರಂಜನಕುಮಾರ್, ಹರ್ಷವರ್ಧನ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಬಿಜೆಪಿ ಜಿಲ್ಲಾಧ್ತಕ್ಷ ನಾರಾಯಣಪ್ರಸಾದ್, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ ಟಿ ಮೋರ್ಚಾ ಅಧ್ಯಕ್ಷ ಜಯಸುಂದರ್ ಇತರರಿದ್ದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…