ಚಾಮರಾಜನಗರ

ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ ಜಿಲ್ಲೆಯಲ್ಲಿ ಬರ ಪರಿಶೀಲನೆ

ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು.

ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, ಕುಲಗಾಣ ಗ್ರಾಮದ ತಿರುಪತಿ ನಾಯಕರ ಸೇವಂತಿ ಫಸಲು, ಶೀಗೆವಾಡಿ ಗ್ರಾಮದ ಮರಿದಾಸನಾಯಕ ಅವರ ಹತ್ತಿ ಫಸಲನ್ನು ವೀಕ್ಷಿಸಿದರು.

ಮೂಡ್ನಾಕೂಡು ಗ್ರಾಮದ ನಾಗೇಶ್ ಅವರ ಬಾಳೆ ತೋಟ ಪರಿಶೀಲನೆ ನಡೆಸಿದರು. ಗಾಳಿ ಮಳೆಗೆ ಬಾಳೆ ಫಸಲು ನೆಲಕ್ಕೆ ಒರಗಿರುವುದನ್ನು ಗಮನಿಸಿದರು.

ಮುಂಗಾರು ಮಳೆ ಬೀಳದೆ ಜೋಳ, ಹತ್ತಿ, ನೆಲಗಡಲೆ ಫಸಲು ಒಣಗಿ ನಷ್ಟವಾಗಿದೆ ಎಂದು ರೈತರು ದೂರಿದರು.

ಸರಿಯಾಗಿ ವಿದ್ಯುತ್ ನೀಡದೆ ಬಾಳೆ, ತರಕಾರಿ ಫಸಲು ಹಾನಿಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಭೇಟಿ ನೀಡಿ ಪರಿಶೀಲಿಸಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದರೂ ಏನು ಪ್ರಯೋಜನವಿಲ್ಲ ಎಂದು ರೈತರು ತಂಡದ ಗಮನಕ್ಕೆ ತಂದರು.

ತಂಡದಲ್ಲಿ ಶಾಸಕ ಶ್ರೀವತ್ಸ, ಡಾ.ನವೀನ್ ಕುಮಾರ್, ಮಾಜಿ ಶಾಸಕರಾದ ಎನ್.ಮಹೇಶ್, ಎಸ್. ಬಾಲರಾಜ್, ಸಿ.ಎಸ್.ನಿರಂಜನಕುಮಾರ್, ಹರ್ಷವರ್ಧನ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಬಿಜೆಪಿ ಜಿಲ್ಲಾಧ್ತಕ್ಷ ನಾರಾಯಣಪ್ರಸಾದ್, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ ಟಿ ಮೋರ್ಚಾ ಅಧ್ಯಕ್ಷ ಜಯಸುಂದರ್ ಇತರರಿದ್ದರು.

lokesh

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

3 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

4 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

5 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

5 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

7 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

7 hours ago