ಚಾಮರಾಜನಗರ

ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ ಜಿಲ್ಲೆಯಲ್ಲಿ ಬರ ಪರಿಶೀಲನೆ

ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು.

ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, ಕುಲಗಾಣ ಗ್ರಾಮದ ತಿರುಪತಿ ನಾಯಕರ ಸೇವಂತಿ ಫಸಲು, ಶೀಗೆವಾಡಿ ಗ್ರಾಮದ ಮರಿದಾಸನಾಯಕ ಅವರ ಹತ್ತಿ ಫಸಲನ್ನು ವೀಕ್ಷಿಸಿದರು.

ಮೂಡ್ನಾಕೂಡು ಗ್ರಾಮದ ನಾಗೇಶ್ ಅವರ ಬಾಳೆ ತೋಟ ಪರಿಶೀಲನೆ ನಡೆಸಿದರು. ಗಾಳಿ ಮಳೆಗೆ ಬಾಳೆ ಫಸಲು ನೆಲಕ್ಕೆ ಒರಗಿರುವುದನ್ನು ಗಮನಿಸಿದರು.

ಮುಂಗಾರು ಮಳೆ ಬೀಳದೆ ಜೋಳ, ಹತ್ತಿ, ನೆಲಗಡಲೆ ಫಸಲು ಒಣಗಿ ನಷ್ಟವಾಗಿದೆ ಎಂದು ರೈತರು ದೂರಿದರು.

ಸರಿಯಾಗಿ ವಿದ್ಯುತ್ ನೀಡದೆ ಬಾಳೆ, ತರಕಾರಿ ಫಸಲು ಹಾನಿಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಭೇಟಿ ನೀಡಿ ಪರಿಶೀಲಿಸಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದರೂ ಏನು ಪ್ರಯೋಜನವಿಲ್ಲ ಎಂದು ರೈತರು ತಂಡದ ಗಮನಕ್ಕೆ ತಂದರು.

ತಂಡದಲ್ಲಿ ಶಾಸಕ ಶ್ರೀವತ್ಸ, ಡಾ.ನವೀನ್ ಕುಮಾರ್, ಮಾಜಿ ಶಾಸಕರಾದ ಎನ್.ಮಹೇಶ್, ಎಸ್. ಬಾಲರಾಜ್, ಸಿ.ಎಸ್.ನಿರಂಜನಕುಮಾರ್, ಹರ್ಷವರ್ಧನ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಬಿಜೆಪಿ ಜಿಲ್ಲಾಧ್ತಕ್ಷ ನಾರಾಯಣಪ್ರಸಾದ್, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ ಟಿ ಮೋರ್ಚಾ ಅಧ್ಯಕ್ಷ ಜಯಸುಂದರ್ ಇತರರಿದ್ದರು.

lokesh

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

1 hour ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

2 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

2 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

3 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

3 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

4 hours ago