ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು.
ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, ಕುಲಗಾಣ ಗ್ರಾಮದ ತಿರುಪತಿ ನಾಯಕರ ಸೇವಂತಿ ಫಸಲು, ಶೀಗೆವಾಡಿ ಗ್ರಾಮದ ಮರಿದಾಸನಾಯಕ ಅವರ ಹತ್ತಿ ಫಸಲನ್ನು ವೀಕ್ಷಿಸಿದರು.
ಮೂಡ್ನಾಕೂಡು ಗ್ರಾಮದ ನಾಗೇಶ್ ಅವರ ಬಾಳೆ ತೋಟ ಪರಿಶೀಲನೆ ನಡೆಸಿದರು. ಗಾಳಿ ಮಳೆಗೆ ಬಾಳೆ ಫಸಲು ನೆಲಕ್ಕೆ ಒರಗಿರುವುದನ್ನು ಗಮನಿಸಿದರು.
ಮುಂಗಾರು ಮಳೆ ಬೀಳದೆ ಜೋಳ, ಹತ್ತಿ, ನೆಲಗಡಲೆ ಫಸಲು ಒಣಗಿ ನಷ್ಟವಾಗಿದೆ ಎಂದು ರೈತರು ದೂರಿದರು.
ಸರಿಯಾಗಿ ವಿದ್ಯುತ್ ನೀಡದೆ ಬಾಳೆ, ತರಕಾರಿ ಫಸಲು ಹಾನಿಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಭೇಟಿ ನೀಡಿ ಪರಿಶೀಲಿಸಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದರೂ ಏನು ಪ್ರಯೋಜನವಿಲ್ಲ ಎಂದು ರೈತರು ತಂಡದ ಗಮನಕ್ಕೆ ತಂದರು.
ತಂಡದಲ್ಲಿ ಶಾಸಕ ಶ್ರೀವತ್ಸ, ಡಾ.ನವೀನ್ ಕುಮಾರ್, ಮಾಜಿ ಶಾಸಕರಾದ ಎನ್.ಮಹೇಶ್, ಎಸ್. ಬಾಲರಾಜ್, ಸಿ.ಎಸ್.ನಿರಂಜನಕುಮಾರ್, ಹರ್ಷವರ್ಧನ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಬಿಜೆಪಿ ಜಿಲ್ಲಾಧ್ತಕ್ಷ ನಾರಾಯಣಪ್ರಸಾದ್, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ ಟಿ ಮೋರ್ಚಾ ಅಧ್ಯಕ್ಷ ಜಯಸುಂದರ್ ಇತರರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…