ಚಾಮರಾಜನಗರ

ʻಇಡಿʼ ರಾಜಕೀಯ ಬಳಕೆ ಸಾಬೀತು : ಸಂಸದ ಸುನೀಲ್‌ ಬೋಸ್‌

ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ.

ದೇಶವೊಂದರ ಪ್ರಮುಖ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯು ದೇಶಾದ್ಯಂತ ಚುನಾವಣಾ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಕೆಲಸ ರಾಜಕೀಯ ಮಾಡಬೇಕಾದ ಜಾಗದಲ್ಲಿ ವಿರೋಧಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ವಿಷಯವಾಗಿದ್ದು ಸುಪ್ರೀಂಕೋರ್ಟ್ ನ ಈ ಎಚ್ಚರಿಕೆಯು ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯವಾಗಿ ನೀಡಬೇಕಿದ್ದ ಎಚ್ಚರಿಕೆ ಆಗಿದೆ ಎಂದರು.

ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟ ಗೊಳಿಸುವ ಬಿಜೆಪಿಗರ ಹೀನಾಯ ಪ್ರಯತ್ನಗಳು ಇಲ್ಲಿಗೇ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ಇವರಿಗೆ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago