'ED' being used for political purposes is proven: MP Sunil Bose
ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ.
ದೇಶವೊಂದರ ಪ್ರಮುಖ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯು ದೇಶಾದ್ಯಂತ ಚುನಾವಣಾ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಕೆಲಸ ರಾಜಕೀಯ ಮಾಡಬೇಕಾದ ಜಾಗದಲ್ಲಿ ವಿರೋಧಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ವಿಷಯವಾಗಿದ್ದು ಸುಪ್ರೀಂಕೋರ್ಟ್ ನ ಈ ಎಚ್ಚರಿಕೆಯು ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯವಾಗಿ ನೀಡಬೇಕಿದ್ದ ಎಚ್ಚರಿಕೆ ಆಗಿದೆ ಎಂದರು.
ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟ ಗೊಳಿಸುವ ಬಿಜೆಪಿಗರ ಹೀನಾಯ ಪ್ರಯತ್ನಗಳು ಇಲ್ಲಿಗೇ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ಇವರಿಗೆ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ತಿಳಿಸಿದ್ದಾರೆ.
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…