ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆ.ಎಸ್.ಎಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ 109ನೇ ಜಯಂತ್ಯೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ಬದಲಾವಣೆ ತರಲು, ಮುಖ್ಯವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಇಲ್ಲದೇ ಹೋದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವಾಗುವುದಿಲ್ಲ. ಗುಲಾಮಗಿರಿ ಮನಸ್ಥಿತಿಯನ್ನು ಕಿತ್ತೊಗೆಯಬೇಕು. ಇದು ವೈಜ್ಞಾನಿಕ ಶಿಕ್ಷಣದಿಂದ ಸಾಧ್ಯ ಎಂದರು.
ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಒಬ್ಬ ಶ್ರೇಷ್ಠ ಸಂತರು. ಇಡೀ ಸಮಾಜಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದ್ದರು. ಆ ಕಾಲದಲ್ಲಿಯೇ ರಾಜೇಂದ್ರ ಮಹಾಸ್ವಾಮಿಗಳು ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ವಸತಿ ನಿಲಯ ನಿರ್ಮಿಸಿದ್ದರಿಂದ ಇಂದು ಸುತ್ತೂರು ಮಹಾಸಂಸ್ಥಾನ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಗಿದೆ. ಅವರ ಕಾಲದಲ್ಲಿ ಸಣ್ಣ ಝರಿಯಾಗಿದ್ದ ಸಂಸ್ಥೆ ಇಂದು ದೊಡ್ಡ ಸಮುದ್ರವಾಗಿದೆ. ಬಸವಣ್ಣನವರ ಸಂದೇಶವನ್ನು ರಾಜೇಂದ್ರ ಮಹಾಸ್ವಾಮಿಗಳು ಬಹಳ ವ್ಯಾಪಕವಾಗಿ ದೇಶ, ವಿದೇಶಗಳಲ್ಲಿಯೂ ಪಸರಿಸಿದ್ದಾರೆ ಎಂದರು.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…