ಚಾಮರಾಜನಗರ

ಹಸುವಿನ ಸಗಣಿ, ಮಣ್ಣಿನ ಗಣೇಶ ಮಾಡಿ ಮಾದರಿಯಾದ ಈರಣ್ಣ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಕುಗ್ರಾಮ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವವರು ಕಳೆದ ಆರು ವರ್ಷಗಳಿಂದ ತಾವೇ ನಾಟಿ ಹಸುವಿನ ಸಗಣಿ ಹಾಗೂ ಮಣ್ಣಿನಿಂದ ಗಣೇಶ ಮೂರ್ತಿ, ಗಣೇಶನ ವಾಹನ ಇಲಿ, ಪೂಜೆ ಸಾಮಗ್ರಿಗಳನ್ನು ಮಣ್ಣಿನಲ್ಲಿ ತಯಾರು ಮಾಡಿ ಅದಕ್ಕೆ ಬಣ್ಣ ಬಳಿದು ಅಲಂಕಾರ ಮಾಡಿ ವಿಶೇಷ ಪೂಜೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡಲು ಒಂದು ವಾರ ಸಮಯ ತೆಗೆದುಕೊಂಡು ಮಂಟಪದೊಂದಿಗೆ ಮೂರ್ತಿ ನಿರ್ಮಾಣ ಮಾಡಿ ವಿವಿಧ ಬಗೆಯ ಕಲರ್ ಬಳಕೆ ಮಾಡಿ ಬಣ್ಣದ ಲೇಪನ ಮಾಡಿದ್ದಾರೆ.

ಈ ವೇಳೆ ಈರಣ್ಣ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಮಣ್ಣಿನ ಗಣಪತಿಯನ್ನೇ ಬಳಕೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ನಾನೇ ಕಳೆದ ಆರು ವರ್ಷಗಳಿಂದ ಗ್ರಾಮಸ್ಥರ ಸಹಕಾರದಿಂದ ಮಣ್ಣಿನ ಗಣಪತಿ ನಿರ್ಮಾಣ ಮಾಡಿ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

7 mins ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

2 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

3 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

4 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

4 hours ago