ಚಾಮರಾಜನಗರ

ಲಿಂಗಾನುಪಾತವನ್ನು ಸರಿದೂಗಿಸಲು ಪ್ರಯತ್ನ ಅಗತ್ಯ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಪ್ರತಿ 1000 ಪುರುಷರಿಗೆ ಕೇವಲ 935 ಹೆಣ್ಣು ಮಕ್ಕಳ ಲಿಂಗಾನುಪಾತ ಇದೆ. ಅಧಿಕಾರಿಗಳು ಲಿಂಗಾನುಪಾತವನ್ನು ಸರಿದೂಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಯಿ ಕಾರ್ಡ್ ಇದ್ದವರಿಗೆ ಮಾತ್ರ ಸ್ಕ್ಯಾನಿಂಗ್ ಮಾಡಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಬಾರದು ಇದರಿಂದ ಹೆಣ್ಣು ಭ್ರೂಣ ಹತ್ಯೆಗಳು ಹೆಚ್ಚಾಗುತ್ತವೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿರುವವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮವನ್ನು ಅವರ ಮೇಲೆ ಕೈಗೊಳ್ಳಿ ಎಂದರು. ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ನಿರ್ದಿಷ್ಟ ಅವಧಿಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರಿಗೆ ಹೆಣ್ಣು ಭ್ರೂಣ ಹತ್ಯೆ ತಡೆಯಲು ಕುರಿತಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿ ಆರೋಗ್ಯ ಇಲಾಖೆ ಲಿಂಗಾನುಪಾತ ಸರಿದೂಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು. ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡೆಲಿವರಿ ಪ್ರಮಾಣ ಕಡಿಮೆ ಇದೆ.

ಇದನ್ನು ಓದಿ: ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ: ಐಸಿಎಂಆರ್‌, ಏಮ್ಸ್ ಅಧ್ಯಯನದಿಂದ ಬಹಿರಂಗ

ಸದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡೆಲಿವರಿ ಪ್ರಮಾಣ ಕಡಿಮೆಯಾಗಲೂ ಕಾರಣವೇನು ಎಂದು ಪರಿಶೀಲನೆ ನಡೆಸಿ. ಜಿಲ್ಲೆಯಲ್ಲಿ ಶೇ 69 ರಷ್ಟು ಡೆಲಿವರಿ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿವೆ ಎಂದರು. ಹೈ ರಿಸ್ಕ್ ಡೆಲಿವರಿ ಇರುವವರಿಗೆ ಪೌಷ್ಟಿಕ ಆಹಾರ ಸರಿಯಾಗಿ ನೀಡಿ ಪೋಷಣೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಿ ಎಂದು ತಿಳಿಸಿದರು. ನಿಮೋನಿಯವನ್ನು ನಿರ್ಮೂಲನೆ ಮತ್ತು ಅದರ ಕುರಿತು ಅರಿವು ಮೂಡಿಸಲು ನವೆಂಬರ್ 12 ರಿಂದ 28 ಫೆಬ್ರವರಿ 2026 ರ ವರೆಗೆ Social Awareness And Actions To Neutralize Pneumonia Successfully (SAANS) ಅಭಿಯಾನ ರೂಪಿಸಲಾಗಿದೆ.

0-5 ವರ್ಷದೊಳಗಿನ ಮಕ್ಕಳ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಮೋನಿಯ ನಿರ್ಮೂಲನಾ ಲಸಿಕೆ ನೀಡುವ ಅಭಿಯಾನ ಇದಾಗಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಡಾ ಕುಮಾರ ಅವರು (SAANS) ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು. ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಕೆ.ಪಿ ಅಶ್ವಥ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್. ಆಶಾಲತಾ, ಡಾ. ಬೆಟ್ಟಸ್ವಾಮಿ, ನಿವೃತ್ತ ಡಿ.ಹೆಚ್.ಓ ಡಾ.ಟಿ.ಎನ್. ಮರೀಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

8 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago