ಚಾಮರಾಜನಗರ

ಉಪವಾಸ ಸತ್ಯಾಗ್ರಹ ಧರಣಿ ವೇಳೆ ವೃದ್ಧ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) ಎಂಬ ವೃದ್ಧನೇ ಅಸ್ವಸ್ಥಗೊಂಡು ಮಲೆ ಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಕಳೆದ ಎರಡು ದಿನಗಳಿಂದಲೂ ಸಹ ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ಗ್ರಾಮಸ್ಥರು ಎಲ್ಲರೂ ಸಹ ಹಗಲು ರಾತ್ರಿ ಎನ್ನದೆ ಭಾಗವಹಿಸುತ್ತಿದ್ದಾರೆ. ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಸತ್ಯಾಗ್ರಹ ಹಮ್ಮಿಕೊಂಡ ಮೊದಲ ದಿನವೇ ಹನೂರು ಚೆಸ್ಕಾಂ ಇಲಾಖೆಯ ಎಇಇ ರಂಗಸ್ವಾಮಿ ಸ್ಥಳಕ್ಕೆ ಬಂದು ಭೇಟಿ ನೀಡಿ ಮನವಿಯನ್ನು ಸ್ವೀಕರಿಸಿ ಭರವಸೆ ನೀಡಿದ್ದರು. ಆದರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿಯಾಗುವವರೆಗೂ ಅಥವಾ ವಿದ್ಯುತ್ ಸಂಪರ್ಕ ಕಲ್ಪಿಸುವವರೆಗೂ ಸಹ ಉಪವಾಸ ಸತ್ಯಾಗ್ರಹ ಧರಣಿಯನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾಮಸ್ಥರು ಕುಳಿತಿದ್ದಾರೆ.

ಡೋಲಿಯಲ್ಲಿ ವೃದ್ಧನನ್ನು ಕರೆತಂದ ಗ್ರಾಮಸ್ಥರು: ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ವೃದ್ಧನೊಬ್ಬ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಡೋಲಿ ಕಟ್ಟಿ ಒತ್ತುಕೊಂಡು ದಾರಿಯಲ್ಲಿ ಬರುತ್ತಿದ್ದರು. ಆ ಬಳಿಕ ಮಾರ್ಗ ಮಧ್ಯ ಅರಣ್ಯ ಇಲಾಖೆಯ ವಾಹನ ಒಂದು ಬಂದಿದ್ದು ವೃದ್ಧನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದೆ. ಇಂತಹ ಘಟನೆ ನಡೆಯಬಹುದು ಎಂಬ ಮುನ್ಸೂಚನೆ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮ ವಹಿಸದೆ ನಿರ್ಲಕ್ಷ ವಹಿಸಿದ್ದಾರೆ ಅಧಿಕಾರಿಗಳು ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಧರಣಿಯಲ್ಲಿ ಮೆದಗನಾಣೆ ಗ್ರಾಮದ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

27 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

33 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

34 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

35 mins ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

36 mins ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

36 mins ago