ಚಾಮರಾಜನಗರ

ಉಪವಾಸ ಸತ್ಯಾಗ್ರಹ ಧರಣಿ ವೇಳೆ ವೃದ್ಧ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) ಎಂಬ ವೃದ್ಧನೇ ಅಸ್ವಸ್ಥಗೊಂಡು ಮಲೆ ಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಕಳೆದ ಎರಡು ದಿನಗಳಿಂದಲೂ ಸಹ ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ಗ್ರಾಮಸ್ಥರು ಎಲ್ಲರೂ ಸಹ ಹಗಲು ರಾತ್ರಿ ಎನ್ನದೆ ಭಾಗವಹಿಸುತ್ತಿದ್ದಾರೆ. ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಸತ್ಯಾಗ್ರಹ ಹಮ್ಮಿಕೊಂಡ ಮೊದಲ ದಿನವೇ ಹನೂರು ಚೆಸ್ಕಾಂ ಇಲಾಖೆಯ ಎಇಇ ರಂಗಸ್ವಾಮಿ ಸ್ಥಳಕ್ಕೆ ಬಂದು ಭೇಟಿ ನೀಡಿ ಮನವಿಯನ್ನು ಸ್ವೀಕರಿಸಿ ಭರವಸೆ ನೀಡಿದ್ದರು. ಆದರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿಯಾಗುವವರೆಗೂ ಅಥವಾ ವಿದ್ಯುತ್ ಸಂಪರ್ಕ ಕಲ್ಪಿಸುವವರೆಗೂ ಸಹ ಉಪವಾಸ ಸತ್ಯಾಗ್ರಹ ಧರಣಿಯನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾಮಸ್ಥರು ಕುಳಿತಿದ್ದಾರೆ.

ಡೋಲಿಯಲ್ಲಿ ವೃದ್ಧನನ್ನು ಕರೆತಂದ ಗ್ರಾಮಸ್ಥರು: ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ವೃದ್ಧನೊಬ್ಬ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಡೋಲಿ ಕಟ್ಟಿ ಒತ್ತುಕೊಂಡು ದಾರಿಯಲ್ಲಿ ಬರುತ್ತಿದ್ದರು. ಆ ಬಳಿಕ ಮಾರ್ಗ ಮಧ್ಯ ಅರಣ್ಯ ಇಲಾಖೆಯ ವಾಹನ ಒಂದು ಬಂದಿದ್ದು ವೃದ್ಧನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದೆ. ಇಂತಹ ಘಟನೆ ನಡೆಯಬಹುದು ಎಂಬ ಮುನ್ಸೂಚನೆ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮ ವಹಿಸದೆ ನಿರ್ಲಕ್ಷ ವಹಿಸಿದ್ದಾರೆ ಅಧಿಕಾರಿಗಳು ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಧರಣಿಯಲ್ಲಿ ಮೆದಗನಾಣೆ ಗ್ರಾಮದ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

2 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

3 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago