ಚಾಮರಾಜನಗರ

ಉಪವಾಸ ಸತ್ಯಾಗ್ರಹ ಧರಣಿ ವೇಳೆ ವೃದ್ಧ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) ಎಂಬ ವೃದ್ಧನೇ ಅಸ್ವಸ್ಥಗೊಂಡು ಮಲೆ ಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಕಳೆದ ಎರಡು ದಿನಗಳಿಂದಲೂ ಸಹ ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ಗ್ರಾಮಸ್ಥರು ಎಲ್ಲರೂ ಸಹ ಹಗಲು ರಾತ್ರಿ ಎನ್ನದೆ ಭಾಗವಹಿಸುತ್ತಿದ್ದಾರೆ. ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಸತ್ಯಾಗ್ರಹ ಹಮ್ಮಿಕೊಂಡ ಮೊದಲ ದಿನವೇ ಹನೂರು ಚೆಸ್ಕಾಂ ಇಲಾಖೆಯ ಎಇಇ ರಂಗಸ್ವಾಮಿ ಸ್ಥಳಕ್ಕೆ ಬಂದು ಭೇಟಿ ನೀಡಿ ಮನವಿಯನ್ನು ಸ್ವೀಕರಿಸಿ ಭರವಸೆ ನೀಡಿದ್ದರು. ಆದರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿಯಾಗುವವರೆಗೂ ಅಥವಾ ವಿದ್ಯುತ್ ಸಂಪರ್ಕ ಕಲ್ಪಿಸುವವರೆಗೂ ಸಹ ಉಪವಾಸ ಸತ್ಯಾಗ್ರಹ ಧರಣಿಯನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾಮಸ್ಥರು ಕುಳಿತಿದ್ದಾರೆ.

ಡೋಲಿಯಲ್ಲಿ ವೃದ್ಧನನ್ನು ಕರೆತಂದ ಗ್ರಾಮಸ್ಥರು: ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ವೃದ್ಧನೊಬ್ಬ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಡೋಲಿ ಕಟ್ಟಿ ಒತ್ತುಕೊಂಡು ದಾರಿಯಲ್ಲಿ ಬರುತ್ತಿದ್ದರು. ಆ ಬಳಿಕ ಮಾರ್ಗ ಮಧ್ಯ ಅರಣ್ಯ ಇಲಾಖೆಯ ವಾಹನ ಒಂದು ಬಂದಿದ್ದು ವೃದ್ಧನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದೆ. ಇಂತಹ ಘಟನೆ ನಡೆಯಬಹುದು ಎಂಬ ಮುನ್ಸೂಚನೆ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮ ವಹಿಸದೆ ನಿರ್ಲಕ್ಷ ವಹಿಸಿದ್ದಾರೆ ಅಧಿಕಾರಿಗಳು ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಧರಣಿಯಲ್ಲಿ ಮೆದಗನಾಣೆ ಗ್ರಾಮದ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

3 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

3 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

3 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

3 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

3 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

3 hours ago