ಚಾಮರಾಜನಗರ

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿದೆ.

ಕಣ್ಣಮ್ಮ ಎಂಬಾಕೆ ಹಲ್ಲೆಗೊಳಗಾದ ವೃದ್ಧೆಯಾಗಿದ್ದು ಅಂಗ ಮುತ್ತು ಈತನ ಮಗಳು ಸೆಲ್ವಿ ಹಾಗೂ ಸಂಬಂಧಿ ಮಹಿಳೆ ಮಂಜು ಎಂಬವರು ಬಂಧಿತರು.

ಕಣ್ಣಮ್ಮ ತಮ್ಮ ಜಮೀನಿನಲ್ಲಿ ಹುರುಳಿ ಬೆಳೆಯನ್ನು ಬೆಳೆದಿದ್ದರು. ಇದನ್ನು ಪಕ್ಕದ ಜಮೀನಿನ ಪಳನಿಸ್ವಾಮಿ ಎಂಬವರು ಹಸು ಬಿಟ್ಟು ಮೇಯಿಸಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಯಾರು ಮೇಯಿಸಿದ್ದಾರೆ ಎಂದು ಗೊತ್ತಿಲ್ಲ ಎಂದು ತಿಳಿಸಿದ್ದರು. ಜಮೀನಿನಲ್ಲಿ ಪಳನಿ ಸ್ವಾಮಿ ರವರಿಗೆ ಸೇರಿದ ಬಿಂದಿಗೆ ಹಗ್ಗ ಬಿದ್ದಿರುವುದನ್ನು ಕಂಡು ನೀವು ಹಸು ಬಿಟ್ಟು ಹುರುಳಿ ಮೇಯಿಸಿದಿದ್ದ ಮೇಲೆ ನಿಮ್ಮ ವಸ್ತುಗಳು ನಮ್ಮ ಜಮೀನಿಗೆ ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಸಮರ್ಪಕ ಉತ್ತರ ನೀಡದಿದ್ದಾಗ ನಮ್ಮ ತಾಯಿ ತಂದೆ ರಾಮಪುರ ಪೊಲೀಸ್ ಠಾಣೆಗೆ ಮನವಿ ನೀಡಿ ಪಳನಿ ಸ್ವಾಮಿರವರಿಗೆ ಬುದ್ಧಿ ಹೇಳುವಂತೆ ಕೇಳಿಕೊಂಡಿದ್ದರು. ಈ ಸಂಬಂಧ ಪಳನಿಸ್ವಾಮಿ ಅವರನ್ನು ಪೊಲೀಸ್ ಠಾಣೆಗೆ ಬರುವಂತೆ ಪೊಲೀಸರು ದೂರವಾಣಿ ಕರೆ ಮಾಡಿ ತಿಳಿಸಿದ್ದಾಗ ಬರುವುದಾಗಿ ತಿಳಿಸಿ ಸುಮ್ಮನಿದ್ದರೂ ಆದರೆ ಜನವರಿ 24 ರಂದು ಪಳನಿಸ್ವಾಮಿ ಈ ದಿನ ಹೆಂಡತಿ ಚೆಲುವೆ ಅಣ್ಣ ಅಂಗಮುತ್ತು, ಪಳನಿ ಸ್ವಾಮಿ ರವರ ಅಣ್ಣನ ಮಗಳಾದ ಮಂಜು ಏಕಾಏಕಿ ಬಂದು ಪೊಲೀಸರಿಗೆ ನಮ್ಮ ಬಗ್ಗೆ ಹೇಳುತ್ತೀರಾ ಎಂದು ತೀಟೆ ಜಗಳ ತೆಗೆದು ನಮ್ಮ ತಾಯಿಯ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದರು. ಈ ವೇಳೆ ಸಮೀಪದ ಜಮೀನಿನ ಮಾಲೀಕರು ನೀವು ಮಾಡುತ್ತಿರುವುದು ಸರಿಯಿಲ್ಲ ಎಂದು ಬುದ್ಧಿವಾದ ಹೇಳಿದಾಗ ಅಂಗಮುತ್ತು ಈ ಮಾದಿಗ ಸೂಳೆಮಕ್ಕಳನ್ನು ಒಡೆದು ಸಾಯಿಸು ಎಂದು ತಿಳಿಸಿದ್ದಲ್ಲದೆ ಮಂಜು ಕಣ್ಣಮ್ಮ ರವರನ್ನು ಕಟ್ಟಿ ಹಾಕಿದ್ದಾರೆ ಎಂದು ದೂರು ನೀಡಿ ಸೆಲ್ವಿ ಅಂಗಮುತ್ತು ಮಂಜುರವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಮಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ರಾಮಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಥಳಕ್ಕೆ ಎಸ್.ಪಿ. ಭೇಟಿ : ರಾಮಪುರ ಪೊಲೀಸ್ ಠಾಣ ವ್ಯಾಪ್ತಿಯ ಕೆ ಆರ್ ನಗರದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಕಣ್ಣಮ್ಮ ರವರನ್ನು ಮರಕ್ಕೆ ಕಟ್ಟು ಹಾಕಿ ಅಲ್ಲೇ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಹಾಗೂ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

51 mins ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

5 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

6 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

7 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

8 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

9 hours ago