ಚಾಮರಾಜನಗರ

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿದೆ.

ಕಣ್ಣಮ್ಮ ಎಂಬಾಕೆ ಹಲ್ಲೆಗೊಳಗಾದ ವೃದ್ಧೆಯಾಗಿದ್ದು ಅಂಗ ಮುತ್ತು ಈತನ ಮಗಳು ಸೆಲ್ವಿ ಹಾಗೂ ಸಂಬಂಧಿ ಮಹಿಳೆ ಮಂಜು ಎಂಬವರು ಬಂಧಿತರು.

ಕಣ್ಣಮ್ಮ ತಮ್ಮ ಜಮೀನಿನಲ್ಲಿ ಹುರುಳಿ ಬೆಳೆಯನ್ನು ಬೆಳೆದಿದ್ದರು. ಇದನ್ನು ಪಕ್ಕದ ಜಮೀನಿನ ಪಳನಿಸ್ವಾಮಿ ಎಂಬವರು ಹಸು ಬಿಟ್ಟು ಮೇಯಿಸಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಯಾರು ಮೇಯಿಸಿದ್ದಾರೆ ಎಂದು ಗೊತ್ತಿಲ್ಲ ಎಂದು ತಿಳಿಸಿದ್ದರು. ಜಮೀನಿನಲ್ಲಿ ಪಳನಿ ಸ್ವಾಮಿ ರವರಿಗೆ ಸೇರಿದ ಬಿಂದಿಗೆ ಹಗ್ಗ ಬಿದ್ದಿರುವುದನ್ನು ಕಂಡು ನೀವು ಹಸು ಬಿಟ್ಟು ಹುರುಳಿ ಮೇಯಿಸಿದಿದ್ದ ಮೇಲೆ ನಿಮ್ಮ ವಸ್ತುಗಳು ನಮ್ಮ ಜಮೀನಿಗೆ ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಸಮರ್ಪಕ ಉತ್ತರ ನೀಡದಿದ್ದಾಗ ನಮ್ಮ ತಾಯಿ ತಂದೆ ರಾಮಪುರ ಪೊಲೀಸ್ ಠಾಣೆಗೆ ಮನವಿ ನೀಡಿ ಪಳನಿ ಸ್ವಾಮಿರವರಿಗೆ ಬುದ್ಧಿ ಹೇಳುವಂತೆ ಕೇಳಿಕೊಂಡಿದ್ದರು. ಈ ಸಂಬಂಧ ಪಳನಿಸ್ವಾಮಿ ಅವರನ್ನು ಪೊಲೀಸ್ ಠಾಣೆಗೆ ಬರುವಂತೆ ಪೊಲೀಸರು ದೂರವಾಣಿ ಕರೆ ಮಾಡಿ ತಿಳಿಸಿದ್ದಾಗ ಬರುವುದಾಗಿ ತಿಳಿಸಿ ಸುಮ್ಮನಿದ್ದರೂ ಆದರೆ ಜನವರಿ 24 ರಂದು ಪಳನಿಸ್ವಾಮಿ ಈ ದಿನ ಹೆಂಡತಿ ಚೆಲುವೆ ಅಣ್ಣ ಅಂಗಮುತ್ತು, ಪಳನಿ ಸ್ವಾಮಿ ರವರ ಅಣ್ಣನ ಮಗಳಾದ ಮಂಜು ಏಕಾಏಕಿ ಬಂದು ಪೊಲೀಸರಿಗೆ ನಮ್ಮ ಬಗ್ಗೆ ಹೇಳುತ್ತೀರಾ ಎಂದು ತೀಟೆ ಜಗಳ ತೆಗೆದು ನಮ್ಮ ತಾಯಿಯ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದರು. ಈ ವೇಳೆ ಸಮೀಪದ ಜಮೀನಿನ ಮಾಲೀಕರು ನೀವು ಮಾಡುತ್ತಿರುವುದು ಸರಿಯಿಲ್ಲ ಎಂದು ಬುದ್ಧಿವಾದ ಹೇಳಿದಾಗ ಅಂಗಮುತ್ತು ಈ ಮಾದಿಗ ಸೂಳೆಮಕ್ಕಳನ್ನು ಒಡೆದು ಸಾಯಿಸು ಎಂದು ತಿಳಿಸಿದ್ದಲ್ಲದೆ ಮಂಜು ಕಣ್ಣಮ್ಮ ರವರನ್ನು ಕಟ್ಟಿ ಹಾಕಿದ್ದಾರೆ ಎಂದು ದೂರು ನೀಡಿ ಸೆಲ್ವಿ ಅಂಗಮುತ್ತು ಮಂಜುರವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಮಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ರಾಮಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಥಳಕ್ಕೆ ಎಸ್.ಪಿ. ಭೇಟಿ : ರಾಮಪುರ ಪೊಲೀಸ್ ಠಾಣ ವ್ಯಾಪ್ತಿಯ ಕೆ ಆರ್ ನಗರದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಕಣ್ಣಮ್ಮ ರವರನ್ನು ಮರಕ್ಕೆ ಕಟ್ಟು ಹಾಕಿ ಅಲ್ಲೇ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಹಾಗೂ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

2 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

3 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

4 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

5 hours ago