Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ. ತಾಲೂಕಿನ ಅಜ್ಜೀಪುರ ಗ್ರಾಮದ ಪಳನಿ ಸ್ವಾಮಿ ಎಂಬ ರೈತನ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟವಾಗಿದೆ.

ಘಟನೆ ವಿವರ
ಬುಧವಾರ ಮಧ್ಯಾಹ ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ವಿದ್ಯುತ್ ತಂತಿಗಳು ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹತ್ತಿಕೊಂಡಿದೆ. ಈ ಬೆಂಕಿಯ ಕೆನ್ನಾಲಿಗೆ ಕೆಳಗಡೆ ಇದ್ದಂತಹ ಕಬ್ಬು ಬೆಳೆಯ ಮೇಲೆ ಬಿದ್ದು ಆರು ಎಕರೆಗೂ ಹೆಚ್ಚು ಕಬ್ಬು ಬೆಳೆ ನಾಶವಾಗಿದೆ.ಕೈಗೆ ಬಂದ ತುತ್ತು ಬಾಯಿಗೆ ಬಾರದ ಆಗೇ ಆಗಿದ್ದು, ಇದರಿಂದ ರೈತ ಪಳನಿಸ್ವಾಮಿ ಆತಂಕಕ್ಕೆ ಒಳಗಾಗಿದ್ದು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ ಗಾಳಿಯ ರಭಸ ಹೆಚ್ಚು ಇದ್ದ ಕಾರಣ ಅಗ್ನಿಶಾಮಕ ವಾಹನ ಬರುವ ವೇಳೆಗೆ ಸಾಕಷ್ಟು ಪ್ರಮಾಣದಲ್ಲಿ ಕಬ್ಬುಬೆಳೆ ಬೆಂಕಿಗೆ ಆಹುತಿಯಾಗಿತ್ತು. ಆದರೂ ಸಹ ಮುಂಜಾಗಬಹುದಿತ್ತ ಹೆಚ್ಚಿನ ಅನಾಹುತವನ್ನು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಬೆಂಕಿಯನ್ನು ಸಂಪೂರ್ಣ ನಂದಿಸಿದರು.

ಸಾಲ ಮಾಡಿ ಕಬ್ಬು ಬೆಳೆಯನ್ನು ಮಾಡಿದಂತಹ ಪಳನಿ ಸ್ವಾಮಿ ಎಂಬ ರೈತನಿಗೆ ಇದೀಗ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರು ನಷ್ಟವಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘಟನೆಗಳು ಹಾಗೂ ಪಳಮಿ ಸ್ವಾಮಿ ಒತ್ತಾಯ ಮಾಡಿದ್ದಾರೆ.

Tags:
error: Content is protected !!