ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ. ತಾಲೂಕಿನ ಅಜ್ಜೀಪುರ ಗ್ರಾಮದ ಪಳನಿ ಸ್ವಾಮಿ ಎಂಬ ರೈತನ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟವಾಗಿದೆ.
ಘಟನೆ ವಿವರ
ಬುಧವಾರ ಮಧ್ಯಾಹ ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ವಿದ್ಯುತ್ ತಂತಿಗಳು ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹತ್ತಿಕೊಂಡಿದೆ. ಈ ಬೆಂಕಿಯ ಕೆನ್ನಾಲಿಗೆ ಕೆಳಗಡೆ ಇದ್ದಂತಹ ಕಬ್ಬು ಬೆಳೆಯ ಮೇಲೆ ಬಿದ್ದು ಆರು ಎಕರೆಗೂ ಹೆಚ್ಚು ಕಬ್ಬು ಬೆಳೆ ನಾಶವಾಗಿದೆ.ಕೈಗೆ ಬಂದ ತುತ್ತು ಬಾಯಿಗೆ ಬಾರದ ಆಗೇ ಆಗಿದ್ದು, ಇದರಿಂದ ರೈತ ಪಳನಿಸ್ವಾಮಿ ಆತಂಕಕ್ಕೆ ಒಳಗಾಗಿದ್ದು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ ಗಾಳಿಯ ರಭಸ ಹೆಚ್ಚು ಇದ್ದ ಕಾರಣ ಅಗ್ನಿಶಾಮಕ ವಾಹನ ಬರುವ ವೇಳೆಗೆ ಸಾಕಷ್ಟು ಪ್ರಮಾಣದಲ್ಲಿ ಕಬ್ಬುಬೆಳೆ ಬೆಂಕಿಗೆ ಆಹುತಿಯಾಗಿತ್ತು. ಆದರೂ ಸಹ ಮುಂಜಾಗಬಹುದಿತ್ತ ಹೆಚ್ಚಿನ ಅನಾಹುತವನ್ನು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಬೆಂಕಿಯನ್ನು ಸಂಪೂರ್ಣ ನಂದಿಸಿದರು.
ಸಾಲ ಮಾಡಿ ಕಬ್ಬು ಬೆಳೆಯನ್ನು ಮಾಡಿದಂತಹ ಪಳನಿ ಸ್ವಾಮಿ ಎಂಬ ರೈತನಿಗೆ ಇದೀಗ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರು ನಷ್ಟವಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘಟನೆಗಳು ಹಾಗೂ ಪಳಮಿ ಸ್ವಾಮಿ ಒತ್ತಾಯ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…