ಚಾಮರಾಜನಗರ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ಸುಮಾರು ರಾತ್ರಿ 8.30ರಲ್ಲಿ ಸಾಕಮ್ಮಾಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಹುರಿಯಲಾರಂಭಿಸಿತು. ಬೆಂಕಿಯಿಂದ ನಿರ್ಮಾಣವಾದ ಹೊಗೆಯು ಪಕ್ಕದ ಮಯೂರ ಬೇಕರಿಗೆ ಹಾಗೂ ರಸ್ತೆಗೆ ಆವರಿಸಿತು. ನೋಡ ನೋಡುತ್ತಲೆ ಬೆಂಕಿಯ ಕೆನ್ನಾಲಿಗೆ 108 ಅಡಿ ಉದ್ದವಿರುವ ಸಾಕಮ್ಮಸ್ ಅಂಗಡಿಯನ್ನು ಆವರಿಸಿತು.

ಬೆಂಕಿಯ ತೀವ್ರತೆ ಕಂಡು ಅಕ್ಕಪಕ್ಕವಿದ್ದ ಅಂಗಡಿ- ಮುಂಗಟ್ಟುಗಳ ಬಾಗಿಲು ಬಂದ್ ಮಾಡಲಾಯಿತು. ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನೋಡಲು ಬಂದ ಜನರನ್ನು ಲಾಠಿ ಬೀಸಿ ಚದುರಿಸಿದರು. ಅಂಗಡಿ ಪಕ್ಕದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರು, ಬೈಕ್ ಗಳನ್ನು ತೆರವುಗೊಳಿಸಿದರು. ಅಷ್ಟರಾಗಲೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿ ಬಾಗಿಲು ಹೊಡೆದು ಬೆಂಕಿ ನಂದಿಸಲು ಹರಸಾಹಸ ಪಟ್ಟರು. 1 ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದರು.

ಇನ್ನು ಹೊಸ ವರ್ಷ ಆಚರಣೆಗೆ ಮಯೂರ ಬೇಕರಿಯಲ್ಲಿ ಸಿದ್ದಪಡಿಸಿದ್ದ ಸಿಹಿ ತಿಂಡಿಗಳು ಹಾಗೂ ಕೇಕ್ ಹೊಗೆ ಘಾಟಿಗೆ ನಾಶವಾಯಿತು. ಸಾಕಮ್ಮಸ್ ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಬೆಲೆಬಾಳುವ ವಸ್ತುಗಳು ಹಾನಿಗೊಳಗಾಯಿತು. ಅದೃಷ್ಟವಶಾತ್ ಅಗ್ನಿ ಅವಘಡ ಸಂಭವಿಸಿದ ಸಾಕಮ್ಮಸ್ ಅಂಗಡಿ 50 ಮೀಟರ್ ನಲ್ಲಿಯೇ ಪೆಟ್ರೋಲ್ ಬಂಕ್ ಇದ್ದು ಯಾವುದೇ ತೊಂದರೆ ಆಗಲಿಲ್ಲ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago