ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಸುಮಾರು ರಾತ್ರಿ 8.30ರಲ್ಲಿ ಸಾಕಮ್ಮಾಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಹುರಿಯಲಾರಂಭಿಸಿತು. ಬೆಂಕಿಯಿಂದ ನಿರ್ಮಾಣವಾದ ಹೊಗೆಯು ಪಕ್ಕದ ಮಯೂರ ಬೇಕರಿಗೆ ಹಾಗೂ ರಸ್ತೆಗೆ ಆವರಿಸಿತು. ನೋಡ ನೋಡುತ್ತಲೆ ಬೆಂಕಿಯ ಕೆನ್ನಾಲಿಗೆ 108 ಅಡಿ ಉದ್ದವಿರುವ ಸಾಕಮ್ಮಸ್ ಅಂಗಡಿಯನ್ನು ಆವರಿಸಿತು.
ಬೆಂಕಿಯ ತೀವ್ರತೆ ಕಂಡು ಅಕ್ಕಪಕ್ಕವಿದ್ದ ಅಂಗಡಿ- ಮುಂಗಟ್ಟುಗಳ ಬಾಗಿಲು ಬಂದ್ ಮಾಡಲಾಯಿತು. ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನೋಡಲು ಬಂದ ಜನರನ್ನು ಲಾಠಿ ಬೀಸಿ ಚದುರಿಸಿದರು. ಅಂಗಡಿ ಪಕ್ಕದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರು, ಬೈಕ್ ಗಳನ್ನು ತೆರವುಗೊಳಿಸಿದರು. ಅಷ್ಟರಾಗಲೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿ ಬಾಗಿಲು ಹೊಡೆದು ಬೆಂಕಿ ನಂದಿಸಲು ಹರಸಾಹಸ ಪಟ್ಟರು. 1 ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದರು.
ಇನ್ನು ಹೊಸ ವರ್ಷ ಆಚರಣೆಗೆ ಮಯೂರ ಬೇಕರಿಯಲ್ಲಿ ಸಿದ್ದಪಡಿಸಿದ್ದ ಸಿಹಿ ತಿಂಡಿಗಳು ಹಾಗೂ ಕೇಕ್ ಹೊಗೆ ಘಾಟಿಗೆ ನಾಶವಾಯಿತು. ಸಾಕಮ್ಮಸ್ ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಬೆಲೆಬಾಳುವ ವಸ್ತುಗಳು ಹಾನಿಗೊಳಗಾಯಿತು. ಅದೃಷ್ಟವಶಾತ್ ಅಗ್ನಿ ಅವಘಡ ಸಂಭವಿಸಿದ ಸಾಕಮ್ಮಸ್ ಅಂಗಡಿ 50 ಮೀಟರ್ ನಲ್ಲಿಯೇ ಪೆಟ್ರೋಲ್ ಬಂಕ್ ಇದ್ದು ಯಾವುದೇ ತೊಂದರೆ ಆಗಲಿಲ್ಲ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…