ಚಾಮರಾಜನಗರ

ಚಾಮರಾಜನಗರದಲ್ಲಿ ಶಿಥಿಲಗೊಂಡಿರುವ ವಿದ್ಯುತ್‌ ಕಂಬ: ಜನ-ಜಾನುವಾರುಗಳಿಗೆ ಭಾರೀ ಕಂಟಕ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್‌ ಲೈನ್‌ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್‌ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ.

ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ ವ್ಯವಸಾಯ ಮಾಡುವ ವೇಳೆ ಏನಾದರೂ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ವ್ಯವಸಾಯ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಂಬ ಅಕಸ್ಮಾತ್‌ ಬಿದ್ದು ಹೋದರೆ 25-30 ಎಕರೆ ಜಮೀನುಗಳಲ್ಲಿ ವ್ಯವಸಾಯ ಮಾಡುವವರಿಗೆ ತೊಂದರೆಯಾಗುತ್ತದೆ.

ಇನ್ನೂ ಶಿಥಿಲಗೊಂಡಿರುವ ವಿದ್ಯುತ್ ಕಂಬದಿಂದ ಅಪಾಯ ಉಂಟಾಗುವ ಸಾಧ್ಯತೆಗಳಿರುವುದರಿಂದ ಈ ಭಾಗದ ರೈತರು ಹಲವು ಎಕರೆ ಜಮೀನಿನ್ನು ಪಾಳು ಬೀಳಿಸಿದ್ದಾರೆ. ಇದಲ್ಲದೇ ಇದರ ಸನಿಹದಲ್ಲೇ ಆನೆ ಕಾರಿಡಾರ್‌ ಇದ್ದು, ಸುವರ್ಣಾವತಿ ಜಲಾಶಯದ ಹಿನ್ನೀರಿಗೆ ಬರುವ ಆನೆಗಳು ಸ್ವಲ್ಪ ಒತ್ತರಿಸಿದರೂ ಸಾಕು ಅವುಗಳ ಮೇಲೆಯೇ ವಿದ್ಯುತ್‌ ವೈರ್‌ಗಳು ಬಿದ್ದು, ಆನೆಗಳು ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಸ್ಥಳದಲ್ಲಿ ಏನಾದರೂ ಪ್ರಾಣ ಹಾನಿಯಾದರೆ ಅದಕ್ಕೆ ಚೆಸ್ಕಾಂನವರೇ ನೇರ ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

8 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

8 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

9 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

10 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

10 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

10 hours ago