ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್ ಲೈನ್ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ.
ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ ವ್ಯವಸಾಯ ಮಾಡುವ ವೇಳೆ ಏನಾದರೂ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ವ್ಯವಸಾಯ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಂಬ ಅಕಸ್ಮಾತ್ ಬಿದ್ದು ಹೋದರೆ 25-30 ಎಕರೆ ಜಮೀನುಗಳಲ್ಲಿ ವ್ಯವಸಾಯ ಮಾಡುವವರಿಗೆ ತೊಂದರೆಯಾಗುತ್ತದೆ.
ಇನ್ನೂ ಶಿಥಿಲಗೊಂಡಿರುವ ವಿದ್ಯುತ್ ಕಂಬದಿಂದ ಅಪಾಯ ಉಂಟಾಗುವ ಸಾಧ್ಯತೆಗಳಿರುವುದರಿಂದ ಈ ಭಾಗದ ರೈತರು ಹಲವು ಎಕರೆ ಜಮೀನಿನ್ನು ಪಾಳು ಬೀಳಿಸಿದ್ದಾರೆ. ಇದಲ್ಲದೇ ಇದರ ಸನಿಹದಲ್ಲೇ ಆನೆ ಕಾರಿಡಾರ್ ಇದ್ದು, ಸುವರ್ಣಾವತಿ ಜಲಾಶಯದ ಹಿನ್ನೀರಿಗೆ ಬರುವ ಆನೆಗಳು ಸ್ವಲ್ಪ ಒತ್ತರಿಸಿದರೂ ಸಾಕು ಅವುಗಳ ಮೇಲೆಯೇ ವಿದ್ಯುತ್ ವೈರ್ಗಳು ಬಿದ್ದು, ಆನೆಗಳು ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಸ್ಥಳದಲ್ಲಿ ಏನಾದರೂ ಪ್ರಾಣ ಹಾನಿಯಾದರೆ ಅದಕ್ಕೆ ಚೆಸ್ಕಾಂನವರೇ ನೇರ ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…