ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್ ಲೈನ್ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ.
ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ ವ್ಯವಸಾಯ ಮಾಡುವ ವೇಳೆ ಏನಾದರೂ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ವ್ಯವಸಾಯ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಂಬ ಅಕಸ್ಮಾತ್ ಬಿದ್ದು ಹೋದರೆ 25-30 ಎಕರೆ ಜಮೀನುಗಳಲ್ಲಿ ವ್ಯವಸಾಯ ಮಾಡುವವರಿಗೆ ತೊಂದರೆಯಾಗುತ್ತದೆ.
ಇನ್ನೂ ಶಿಥಿಲಗೊಂಡಿರುವ ವಿದ್ಯುತ್ ಕಂಬದಿಂದ ಅಪಾಯ ಉಂಟಾಗುವ ಸಾಧ್ಯತೆಗಳಿರುವುದರಿಂದ ಈ ಭಾಗದ ರೈತರು ಹಲವು ಎಕರೆ ಜಮೀನಿನ್ನು ಪಾಳು ಬೀಳಿಸಿದ್ದಾರೆ. ಇದಲ್ಲದೇ ಇದರ ಸನಿಹದಲ್ಲೇ ಆನೆ ಕಾರಿಡಾರ್ ಇದ್ದು, ಸುವರ್ಣಾವತಿ ಜಲಾಶಯದ ಹಿನ್ನೀರಿಗೆ ಬರುವ ಆನೆಗಳು ಸ್ವಲ್ಪ ಒತ್ತರಿಸಿದರೂ ಸಾಕು ಅವುಗಳ ಮೇಲೆಯೇ ವಿದ್ಯುತ್ ವೈರ್ಗಳು ಬಿದ್ದು, ಆನೆಗಳು ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಸ್ಥಳದಲ್ಲಿ ಏನಾದರೂ ಪ್ರಾಣ ಹಾನಿಯಾದರೆ ಅದಕ್ಕೆ ಚೆಸ್ಕಾಂನವರೇ ನೇರ ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…